Publish Date: Sun, 31 May 2026 (16:49 IST)
Updated Date: Sun, 31 May 2026 (16:51 IST)
ಬೆಂಗಳೂರು: ಒಂದು ನಿರ್ದಿಷ್ಟ ಸಮಿತಿ ರಚಿಸಬೇಕೇ ಬೇಡವೇ ಎಂಬುದು ತಿಳಿದಿಲ್ಲ. ಇದು ಪಕ್ಷದ ನಾಯಕತ್ವವು ನಿರ್ಧರಿಸಬೇಕಾದ ವಿಷಯವಾಗಿದೆ ಎಂದು ಹೊಸ ಸರ್ಕಾರದ ಸಚಿವ ಸಂಪುಟ ರಚನೆ ಕುರಿತು ಪ್ರಶ್ನೆಗೆ ಮಾಜಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ತಕ್ಷಣಕ್ಕೆ ಮುಖ್ಯಮಂತ್ರಿ ಆಯ್ಕೆಯ ಮೇಲೆ ಹೆಚ್ಚಿನ ಗಮನ ಹರಿಸಲಾಗಿತ್ತು. ಇತರೆ ವಿಷಯಗಳ ಕುರಿತು ಚರ್ಚಿಸಲು ಬೇಕಾದಷ್ಟು ಸಮಯ ಇದೆ' ಎಂದು ತಿಳಿಸಿದ್ದಾರೆ.
'ಅಗತ್ಯವಿದ್ದರೆ ಔಪಚಾರಿಕ ಸಮತಿಯನ್ನು ರಚಿಸಬಹುದು. ಇದೀಗ ಸದ್ಯದ ಮಟ್ಟಿಗೆ ಸಚಿವ ಸಂಪುಟ ರಚನೆಗೆ ಮೊದಲ ಆದ್ಯತೆಯಾಗಿದೆ. ಏಕೆಂದರೆ ಸಚಿವ ಸಂಪುಟ ಹುದ್ದೆಗಳನ್ನು ಹೆಚ್ಚು ಸಮಯ ಖಾಲಿ ಬಿಡಬಾರದು. ಸರ್ಕಾರವು ತನ್ನ ಆಡಳಿತಾತ್ಮಕ ಕೆಲಸವನ್ನು ಪುನರಾರಂಭಿಸಬೇಕಿದೆ ಎಂದು ಮಾಹಿತಿ ನೀಡಿದರು.
'ಡಿ.ಕೆ. ಶಿವಕುಮಾರ್ ಪಕ್ಷಕ್ಕಾಗಿ ಹಲವಾರು ವರ್ಷಗಳಿಂದ ದುಡಿಯುತ್ತಿದ್ದಾರೆ. ಅವರ ಬಗ್ಗೆ ವ್ಯಾಪಕ ಮನ್ನಣೆ ಇದ್ದು, ಪ್ರಶ್ನಾತೀತವಾಗಿದೆ' ಎಂದು ತಿಳಿಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ