ಪ್ರತಿಪಕ್ಷದೊಂದಿಗೆ ವಿಜಯೇಂದ್ರ ಹೊಂದಾಣಿಕೆಯ ಸಾಕ್ಷ್ಯಾಧಾರ ಇದೆ: ಯತ್ನಾಳ್‌ ಹೊಸ ಬಾಂಬ್

Sampriya
ಭಾನುವಾರ, 1 ಡಿಸೆಂಬರ್ 2024 (12:25 IST)
Photo Courtesy X
ಬೆಳಗಾವಿ: ಬಿಜೆಪಿ ರಾಜ್ಯ ಘಟದಕದ ವಿಜಯೇಂದ್ರ ವಿರೋಧ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡ ಬಗ್ಗೆ ಸಾಕ್ಷ್ಯಾಧಾರಗಳು ನನ್ನ ಬಳಿ ಇವೆ. ಸದ್ಯದಲ್ಲಿಯೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದರು.

ನಾವು ವಕ್ಫ್ ಹೋರಾಟ ಮಾಡುತ್ತಿದ್ದೇವೆ ಹೊರತು ಯಡಿಯೂರಪ್ಪ ಕುಟುಂಬ, ಭ್ರಷ್ಟಾಚಾರದ ಬಗ್ಗೆ ನಾವು ಮಾತನಾಡುತ್ತಿಲ್ಲ. ಯಡಿಯೂರಪ್ಪ ಅವರ ಕುಟುಂಬ ದೇಶದಲ್ಲಿಯೇ ಪ್ರಾಮಾಣಿಕ ಕುಟುಂಬ, ವಿಜಯೇಂದ್ರ ಅಂತೂ ಅಪ್ಪಟ ಚಿನ್ನ, ಬಂಗಾರ ಎಂದು ಹೇಳಿದರೆ ಖುಷಿಯಾಗುತ್ತದೆ. ಅವರಿಗೆ ಭ್ರಷ್ಟಾಚಾರ ಎಂದರೆ ಗೊತ್ತಿಲ್ಲ ಎಂದು ಕಾಲೆಳೆದರು.

ವಿಜಯೇಂದ್ರ ಸದನದ ಬಾವಿಯಲ್ಲಿಯೇ ಡಿಕೆಶಿ ಅವರಿಂದ ಏನೇನು ಸಹಿ ಮಾಡಿಸಿಕೊಂಡರು. ಎಂಬುವ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ. ಇಪ್ಪತ್ತು ಪತ್ರಗಳಿಗೆ ಸಹಿ ಮಾಡಿಸಿಕೊಂಡಿದ್ದೀರಿ, ವಿಡಿಯೋ ಬಿಡುಗಡೆ ಮಾಡಲಾ? ವಿಜಯೇಂದ್ರ ವಿರುದ್ಧ ಎಂದು ಗುಡುಗಿದರು.

ರಮೇಶ್ ಜಾರಕಿಹೊಳಿ ಅವರಿಗೆ ವಿಜಯೇಂದ್ರ ಅವರು ಏನು ಅನ್ಯಾಯ ಮಾಡಿದ್ದಾರೆ? ವಿಜಯೇಂದ್ರ ಅವರು ಯಾರ ಜೊತೆ ಸೇರಿಕೊಂಡು ರಮೇಶ್ ಅವರ ಮಾನ ಹರಾಜು ಹಾಕಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ. ರಮೇಶ್ ಅವರಿಗೆ ಮಾನಸಿಕ ಹಿಂಸೆ ನೀಡಿ ಅವರ ತೇಜೋವಧೆ ಮಾಡಿದ್ದು ಯಾರು? ಎಂಬುದನ್ನು ವಿಜಯೇಂದ್ರ ಹೇಳಲಿ. ಜಿ.ಎಂ. ಸಿದ್ದೇಶ್ವರ ಹಾಗೂ ಆರ್ ಅಶೋಕ್ ಅವರ ಬಗ್ಗೆ ವಿಜಯೇದ್ರ ಏನು ಹೇಳಿದ್ದಾರೆ? ಎಂಬುದರ ಬಗ್ಗೆಯೂ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದರು.

ಇದು ನಮ್ಮ ಪಕ್ಷದ ಸ್ವಾರ್ಥದ ಹೋರಾಟವಲ್ಲ, ಪಕ್ಷವನ್ನು ಕಟ್ಟಿದ ಅನೇಕ ನಾಯಕರು ಅಧಿಕಾರ ಅನುಭವಿಸದೇ ಇದ್ದಾರೆ. ಕರ್ನಾಟಕದಲ್ಲಿ ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರವನ್ನು ತೊಡೆದು ಹಾಕುವ ಬಿಜೆಪಿ ಪಕ್ಷವನ್ನು ಕಟ್ಟಬೇಕು ಎನ್ನುವುದು ಪ್ರಧಾನಿ ಮೋದಿಯವರ ಆಶಯವಾಗಿದೆ. ಆಶಯ ಈಡೇರಿಕೆಗಾಗಿ ಈ ಹೋರಾಟ ನಡೆದಿದೆ. ಭ್ರಷ್ಟಾಚಾರ ಮಾಡುವ ವ್ಯಕ್ತಿಗಳನ್ನು ದೂರವಿಟ್ಟು, ಪ್ರಾಮಾಣಿಕ ವ್ಯಕ್ತಿಗಳಿಗೆ ಪ್ರೋತ್ಸಾಹ ನೀಡಬೇಕು ಎನ್ನುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments