ಯಾವುದೇ ಸೌಲಭ್ಯವಿಲ್ಲ: ಆದರೂ 12 ವರ್ಷಗಳಿಂದ ಆ ಸಿಬ್ಬಂದಿ ಕಾಯುತ್ತಿರುವುದೇನು ಗೊತ್ತಾ?

Webdunia
ಬುಧವಾರ, 25 ಜುಲೈ 2018 (19:07 IST)
ಅಲ್ಲಿ 130 ಜನ ಸಿಬ್ಬಂದಿ ಇದ್ದಾರೆ. ಕಳೆದ 12 ವರ್ಷಗಳಿಂದ ಅವರದ್ದು ಒಂದೇ ಕೆಲಸ. ಅವರು ಭದ್ರತೆ ನೀಡಿದರೆ ಈಗ ಅವರಿಗೆ ಭದ್ರತೆ ಬೇಕಾಗಿದೆ. ಏನೀ ಸ್ಟೋರಿ? ಮುಂದೆ ನೋಡಿ…

ಉತ್ತರ ಕರ್ನಾಟಕದ ಗದಗ ಜಿಲ್ಲೆಯಕಪ್ಪತ್ತಗುಡ್ಡದಲ್ಲಿ 12 ವರ್ಷದಿಂದ ಪವನ ವಿದ್ಯುತ್ ಯಂತ್ರಗಳನ್ನು 130 ಸಿಬ್ಬಂದಿ ಕಾಯುವ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಸರ್ಕಾರಿ ಸೌಲಭ್ಯಗಳೊಂದಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಸುಲ್ಜಾನ್​​ ಕಂಪನಿ ಭದ್ರತಾ ಸಿಬ್ಬಂದಿಗಳ ಹೋರಾಟ ಸಮಿತಿ ಸಂಚಾಲಕ ರವಿಕಾಂತ್​​ ಅಂಗಡಿ ಆಗ್ರಹಿಸಿದ್ದಾರೆ.  

12 ವರ್ಷಗಳಿಂದ ಭದ್ರತಾ ಸಿಬ್ಬಂದಿ ನೇಮಕಾತಿ ಹಾಗೂ ನಿರ್ವಹಣೆಯನ್ನು ಸುಲ್ಜಾನ್ ಕಂಪೆನಿಯು ಹೊರ ಏಜನ್ಸಿಗೆ ನೀಡುತ್ತಾ ಬಂದಿದೆ. ಆರಂಭದಲ್ಲಿ 1,200 ರೂಪಾಯಿ ಸಂಬಳ ಪಡೆಯುತ್ತಿದ್ದ ಸಿಬ್ಬಂದಿ, ಈಗ ₹6,500 ವೇತನ ಪಡೆಯುತ್ತಿದ್ದಾರೆ. ಸಿಬ್ಬಂದಿಗೆ ಸಿಗುವ ಸಂಬಳದಲ್ಲಿ ಕುಟುಂಬ ನಿರ್ವಹಣೆ ಮಾಡಲಾಗುತ್ತಿಲ್ಲ. ವಾರದ ರಜೆ ಸಹಿತ ನೀಡುತ್ತಿಲ್ಲ. ಕಾರ್ಮಿಕ ಕಾಯ್ದೆಯಂತೆ ಕನಿಷ್ಠ ವೇತನವನ್ನೂ ನೀಡುತ್ತಿಲ್ಲ. ಗ್ರ್ಯಾಚೂಟಿ, ಪಿಎಫ್ ಸೇರಿದಂತೆ ಯಾವ ಸೌಲಭ್ಯಗಳೂ ದೊರೆಯುತ್ತಿಲ್ಲ.

ಸಮಸ್ಯೆಗಳ ಕುರಿತು ಗುತ್ತಿಗೆ ಪಡೆದ ಏಜೆನ್ಸಿ ಮತ್ತು ಸುಲ್ಜಾನ್​​ ಕಂಪನಿ ಗಮನಕ್ಕೆ ತಂದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅಲ್ಲದೇ ಇಷ್ಟು ವರ್ಷ ಕೆಲಸ ಮಾಡಿದ ಸಿಬ್ಬಂದಿಯನ್ನು ಏಕಾಏಕಿ ಸೆಪ್ಟೆಂಬರ್ತಿಂಗಳೊಳಗೆ ಕೆಲಸದಿಂದ ತೆಗೆದು ಹಾಕುವ ನೋಟಿಸ್​​ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಬ್ಬಂದಿಯ ನೆರವಿಗೆ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಸುಲ್ಜಾನ್ ಕಂಪನಿ ಮುಂದಾಗಬೇಕು. 12 ವರ್ಷದಿಂದ ಸಿಬ್ಬಂದಿಗೆ ಸಿಗಬೇಕಾದ ಎಲ್ಲಾ ಸೌಲಭ್ಯ ಹಾಗೂ ಸೂಕ್ತ ಭದ್ರತೆ ಒದಗಿಸುವ ಮೂಲಕ ಕೆಲಸದಲ್ಲಿ ಮುಂದುವರೆಸಬೇಕು. ಕಾರ್ಮಿಕ ಕಾಯ್ದೆಯಂತೆ ಕನಿಷ್ಟ ವೇತನ ನೀಡಬೇಕು ಎಂದು ಆಗ್ರಹಿಸಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments