Select Your Language

Notifications

webdunia
webdunia
webdunia
webdunia

ಚುನಾವಣೆಯಲ್ಲಿ ಗೆದ್ದರೂ ಪ್ರಯೋಜನವಿಲ್ಲದಂತಾಗಿದೆ ಎಂದ ಶಾಸಕ ಯಾರು?

ಚುನಾವಣೆಯಲ್ಲಿ ಗೆದ್ದರೂ ಪ್ರಯೋಜನವಿಲ್ಲದಂತಾಗಿದೆ ಎಂದ ಶಾಸಕ ಯಾರು?
ಕುಂದಾಪುರ , ಭಾನುವಾರ, 15 ಜುಲೈ 2018 (20:03 IST)
ವಿಧಾನಸಭೆ ಚುನಾವಣೆ ಮುಗಿದು ಸಮ್ಮಿಶ್ರ ಸರಕಾರ ರಚನೆಯಾಗಿ ತಿಂಗಳುಗಳೇ ಕಳೆಯುತ್ತಿವೆ. ಆದರೆ ಇಲ್ಲೊಬ್ಬ ಶಾಸಕರು ಚುನಾವಣೆಯಲ್ಲಿ ಗೆದ್ದರೂ ಪ್ರಯೋಜನವಿಲ್ಲದಂತಾಗಿದೆ ಎಂದಿದ್ದಾರೆ. 
 
ಯಾರ ದುರಾದೃಷ್ಟವೋ ಗೊತ್ತಿಲ್ಲ. ಗೆದ್ದು ಪ್ರಯೋಜನವಿಲ್ಲದಂತಾಗಿದೆ. ಹೀಗಂತ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಐದು ಬಾರಿ ಶಾಸಕರಾಗಿರುವ ಹಾಲಾಡಿ ಈ ಹೇಳಿಕೆ ನೀಡಿದ್ದಾರೆ. ಕುಂದಾಪುರದ ಬಿಜೆಪಿ ಶಾಸಕರ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಹಾಲಾಡಿ, ಬಜೆಟ್ ನಲ್ಲಿ ಕರಾವಳಿ ಪ್ರದೇಶವನ್ನು ಕಡೆಗಣಿಸಲಾಗಿದೆ. ಕೇಂದ್ರದ ಯೋಜನೆಗಳನ್ನು ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿಲ್ಲ.

ಹೀಗಾಗಿ ಚುನಾವಣೆಯಲ್ಲಿ ಜನತೆಗೆ ನೀಡಿದ ಆಶ್ವಾಸನೆ ಈಡೇರಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ. ಮುಂದೆಯೂ ಕೇಂದ್ರದಲ್ಲಿ ಮೋದಿ ಆಡಳಿತ ಬರಬೇಕು. ಅದಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದಿದ್ದಾರೆ. 
 
 

Share this Story:

Follow Webdunia kannada

ಮುಂದಿನ ಸುದ್ದಿ

ಕಣ್ಣೀರಿಟ್ಟ ಸಿಎಂ; ಹೊರಟ್ಟಿ ಹೇಳಿದ್ದೇನು?