Publish Date: Mon, 23 Jan 2023 (18:26 IST)
Updated Date: Mon, 23 Jan 2023 (18:43 IST)
ನಾಳೆ ಕೆ.ಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಚರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ.ಬೆಳಗ್ಗೆ 11 ಗಂಟೆಯಿಂದ ಸಂಜೆ 5.30 ರವರೆಗೆ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಛೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಲಾಗಿದ್ದು,ಈ ಸಂಬಂಧ ಕೆ.ಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಇಲ್ಲ.ಕೆ.ಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿ ವ್ಯಾಪ್ತಿಯಲ್ಲಿ ನಾಳೆ ಬಸ್ಸುಗಳ ಕಾರ್ಯಚರಣೆಯು ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಕೆ.ಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿಯಿಂದ ಆದೇಶ ಬಿಡುಗಡೆಯಾಗಿದೆ.