Publish Date: Tue, 03 May 2022 (19:04 IST)
Updated Date: Tue, 03 May 2022 (19:06 IST)
ಕರ್ನಾಟಕದಲ್ಲಿ ಸಿಎಂ ಬದಲಾವಣೆಯ ಪ್ರ ಶ್ನೆಯೇ ಇಲ್ಲ..ಯಾರೂ ಮುಖ್ಯಮಂತ್ರಿಯಾಗುವ ಕನಸು ಕಾಣಬೇಡಿ ಎಂದು ಬೆಂಗಳೂರಿನಲ್ಲಿ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ..ಅಮಿತ್ ಶಾ ಬಂದಿದ್ದಾರೆ ಎಂದರೆ ಗೆಲುವು ನಮ್ಮದೇ.. ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಗೆಲುವು ನಮ್ಮದೇ. ಬಸವರಾಜ ಹೊರಟ್ಟಿ ಬಿಜೆಪಿ ಸೇರಿರುವುದು ಒಳ್ಳೆಯ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು. ಸಿಎಂ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ..ಬೊಮ್ಮಾಯಿಗೆ ಕೇಂದ್ರದ ಸಂಪೂರ್ಣ ಸಹಕಾರ ಇದೆ. ಸಿಎಂ ಬದಲಾವಣೆ ಬಗ್ಗೆ ಯಾರೂ ಹಗಲು ಕನಸು ಕಾಣಬೇಡಿ..ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಆರ್. ಅಶೋಕ್, ಸಿಎಂ ಬದಲಾವಣೆ ಎನ್ನುವವರಿಗೆ ತಿರುಗೇಟು ನೀಡಿದ್ದಾರೆ..