Daily Horoscope

ಸಿಎಂ, ನನ್ನ ನಡುವೆ ಕೋಲ್ಡ್-ಹಾಟ್ ವಾರ್ ಇಲ್ಲ: ಪರಮೇಶ್ವರ್

Webdunia
ಭಾನುವಾರ, 3 ಸೆಪ್ಟಂಬರ್ 2017 (12:39 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪರಮೇಶ್ವರ್ ಸ್ಪಷ್ಟನೆ ನೀಡಿದ ಅವರು,ನನಗೆ ಜ್ವರ ಇದ್ದ ಕಾರಣ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ಇದು ಬಿಟ್ಟು ಬೇರೆ ಯಾವುದೇ ಕಾರಣಗಳಿಲ್ಲ ಎಂದರು.
 
 ಕಳೆದ ಆರುವರೆ ವರ್ಷಗಳಿಂದ ನಾವಿಬ್ಬರು ಒಟ್ಟಾಗಿ ಕೆಲಸ ಮಾಡಿದ್ದೇವೆ. ಅವರೊಂದಿಗೆ ಗೃಹ ಸಚಿವರಾಗಿ ಕೆಲಸಮಾಡಿದ್ದ ಆ ಸಂದರ್ಭದಲ್ಲಿಯೂ ನಮ್ಮ ನಡುವೆ ಭಿನ್ನಾಭಿಪ್ರಾಯವಿರಲಿಲ್ಲ ಎಂದು ತಿಳಿಸಿದ್ದಾರೆ.
 
ಸಿಎಂ ಮತ್ತು ನನ್ನ ಮಧ್ಯೆ ಕೋಲ್ಡ್ ವಾರ್ ಅಥವಾ ಕೋಲ್ಡ್- ಹಾಟ್ ಯಾವ ಮನಸ್ತಾಪವೂ ಇಲ್ಲ. ಇದೆಲ್ಲಾ ವಿಪಕ್ಷಗಳು ಹರಡಿಸುತ್ತಿರುವ ಉಹಾಪೋಹ ವರದಿಗಳು ಎಂದು ತಿರುಗೇಟು ನೀಡಿದ್ದಾರೆ. 
 
ಸಚಿವರ ಪಟ್ಟಿಗೆ ನಾನು ಮತ್ತು ಸಿಎಂ ಬೇರೆ ಬೇರೆ ಹೆಸರು ಸೂಚಿಸಿರಬಹಹುದು ಆದರೆ, ಕೊನೆಗೆ ನಾವಿಬ್ಬರು ಒಟ್ಟಾಗಿ ತೀರ್ಮಾನ ತೆಗೆದುಕೊಂಡಿದ್ದೇವೆ. ಭಿನ್ನಾಭಿಪ್ರಾಯದ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments