Webdunia - Bharat's app for daily news and videos

Install App

ಭಯೋತ್ಪಾದಕರಿಗೂ, ಸಿದ್ದರಾಮಯ್ಯಗೂ ಯಾವುದೇ ವ್ಯತ್ಯಾಸವಿಲ್ಲ: ಅರವಿಂದ ಬೆಲ್ಲದ ಗರಂ

Sampriya
ಶನಿವಾರ, 26 ಏಪ್ರಿಲ್ 2025 (18:43 IST)
Photo Credit X
ಹುಬ್ಬಳ್ಳಿ:  ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿ ವೇಳೆ ಉಗ್ರರು  ಧರ್ಮದ ಹೆಸರು ಕೇಳಿ ಗುಂಡು ಹೊಡೆದಿಲ್ಲ ಎಂದ ಸಿದ್ದರಾಮಯ್ಯಗೂ, ಭಯೋತ್ಪಾದಕರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು  ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದರು.  

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದ ಮೇಲೆ ಪಾಕ್‌ನ ಉಗ್ರರು ದಾಳಿ ನಡೆಸಿದಾಗಲೂ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಪರ ಮಾತನಾಡುತ್ತಿದ್ದಾರೆ. ದೇಶದ ಭದ್ರತೆ ಎಂದಾಗ ಯಾವುದೇ ಜಾತಿ, ಧರ್ಮವಿಲ್ಲದೆ ಯೋಚನೆ ಮಾಡಬೇಕು.

ಸಿಎಂ ಸಿದ್ದರಾಮಯ್ಯ ಅವರು ಪಾಕಿಸ್ತಾನದ ವಿರುದ್ಧ ಯುದ್ಧ ನಡೆದರೆ ರಾಜ್ಯದ ಮುಸ್ಲಿಮರು ಏನೆಂದುಕೊಳ್ಳುತ್ತಾರೋ ಎಂದು ಅವರು ಬಾಲಿಶವಾಗಿ ಹೇಳಿಕೆ ನೀಡುತ್ತಿದ್ದಾರೆ. ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ಕ್ಷುಲ್ಲಕ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದರು.

ದೇಶದ ಭದ್ರತೆ ದೃಷ್ಟಿಯಿಂದ ಪಾಕಿಸ್ತಾನವನ್ನು ಮಟ್ಟ ಹಾಕುವ ಕೆಲಸ ಮಾಡಬೇಕಿದೆ. ಆ ನಿಟ್ಟಿನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಸಮರ್ಥವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಆಡಳಿತವಿದ್ದಾಗ ಕಾಶ್ಮೀರದಲ್ಲಿ ಯಾವ ಪರಿಸ್ಥಿತಿಯಿತ್ತು, ಬಿಜೆಪಿ ಆಡಳಿತವಿದ್ದಾಗ ಹೇಗಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ.

ಪಾಕಿಸ್ತಾನದ ವಿರುದ್ಧ ಕೈಗೊಳ್ಳುವ ನಿರ್ಧಾರಕ್ಕೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಆದರೆ, ಅವರದ್ದೇ ಪಕ್ಷದ ಸಚಿವ ಸಂತೋಷ ಲಾಡ್‌ ಅದರ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold fraud case: ಇಡಿ ದಾಳಿ ವೇಳೆ ಐಶ್ವರ್ಯಾ ಗೌಡ ಮನೆಯಲ್ಲಿ ಸಿಕ್ತು ಕಂತೆ ಕಂತೆ ಹಣ, ಇಲ್ಲಿದೆ ಮಾಹಿತಿ

Namma Metro: ನಮ್ಮ ಮೆಟ್ರೋ ಪ್ರಯಾಣ ಸಮಯದಲ್ಲಿ ನಾಳೆ ಸಣ್ಣ ಬದಲಾವಣೆ

ಕರ್ನಾಟಕದಲ್ಲಿರುವ ಮುಸ್ಲಿಂ ಮಹಿಳೆಯರಿಗೆ ಪಾಕ್‌ ಮೇಲೆ ಎಂತಹ ಪ್ರೇಮ, ಪಾಕ್ ಧ್ವಜಕ್ಕೆ ಗೌರವ

Video: ತಿಕ ತೊಳೆಯಕ್ಕೂ ನೀರು ಕೊಡಲ್ಲ ಎಂದ ಭಾರತೀಯರ ವಿರುದ್ಧ ಗಂಟಲು ಸೀಳ್ತೀನಿ ಎಂದು ಸನ್ನೆ ಮಾಡಿ ಪಾಕಿಸ್ತಾನ ರಾಯಭಾರಿ

Video, ಗುಜರಾತ್‌ನಲ್ಲಿ ಪಾಕಿಸ್ತಾನ ಮಾತ್ರವಲ್ಲ ಬಾಂಗ್ಲಾ ವಲಸಿಗರಿಗೂ ಗೇಟ್ ಪಾಸ್ : ಸ್ವಚ್ಛ ಭಾರತ್ ಅಭಿಯಾನ ಶುರು

ಮುಂದಿನ ಸುದ್ದಿ
Show comments