Webdunia - Bharat's app for daily news and videos

Install App

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಿರಾಸೆಯಿಲ್ಲ : ಲಕ್ಷ್ಮಣ ಸವದಿ

Webdunia
ಮಂಗಳವಾರ, 30 ಮೇ 2023 (09:01 IST)
ಚಿಕ್ಕೋಡಿ : ಮನುಷ್ಯನಿಗೆ ದೂರದೃಷ್ಟಿ ಮತ್ತು ತಾಳ್ಮೆ ರಾಜಕೀಯದಲ್ಲಿ ಬಹಳ ಮುಖ್ಯ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗಂತೂ ನಿರಾಸೆ ಆಗಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
 
ಅಥಣಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಸವದಿ, ನಿರೀಕ್ಷೆ ಯಾರಿಗೆ ಇರಲ್ಲ, ಎಲ್ಲರಿಗೂ ಸಹ ನಿರೀಕ್ಷೆ ಇದ್ದೇ ಇರುತ್ತದೆ. ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಸಚಿವರಾಗಬೇಕು, ನಂತರ ಡಿಸಿಎಂ ಆಗಬೇಕು, ಬಳಿಕ ಸಿಎಂ ಆಗಬೇಕು ಎಂದು ನಿರೀಕ್ಷೆ ಇಟ್ಟಿರುತ್ತಾರೆ. ಆಸೆಗಳಿಗೆ ಕೊನೆ ಯಾವತ್ತೂ ಇರುವುದಿಲ್ಲ. ಅದು ಮನುಷ್ಯನ ಸ್ವಾಭಾವಿಕ ಮನಸ್ಥಿತಿ ಎಂದರು.

ಎರಡೂವರೆ ವರ್ಷ ಮಾತ್ರ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಸಿದ್ದರಾಮಯ್ಯ ಅವರನ್ನೇ ಕೇಳಬೇಕು. ಹೈಕಮಾಂಡ್ನಲ್ಲಿ ಯಾವ ರೀತಿ ಚರ್ಚೆ ಆಗಿದೆ ಗೊತ್ತಿಲ್ಲ.

ಅವು 4 ಗೋಡೆಗಳ ಮಧ್ಯೆ ನಡೆದಿರುವಂತದ್ದು. ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ನಡುವೆ ನಡೆದ ಚರ್ಚೆಯನ್ನು ಬಹಿರಂಗಪಡಿಸಿಲ್ಲ. ಹೊರಗಡೆ ಕೇವಲ ಊಹಾಪೋಹಗಳು ಮಾತ್ರ ಇವೆ. ಅವುಗಳಿಗೆ ರೆಕ್ಕೆಪುಕ್ಕ ಕಟ್ಟಿ ಕಾಗೆ ಹಾರಿಸುವ ಕೆಲಸ ಕೆಲ ಜನ ಮಾಡುತ್ತಿದ್ದಾರೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments