Select Your Language

Notifications

webdunia
webdunia
webdunia
webdunia

ಹಿರಿಯ ಮುತ್ಸದ್ದಿ, ಮಾಜಿ ಶಾಸಕ ಇನ್ನಿಲ್ಲ

ಹಿರಿಯ ಮುತ್ಸದ್ದಿ, ಮಾಜಿ ಶಾಸಕ ಇನ್ನಿಲ್ಲ
ದಾವಣಗೆರೆ , ಸೋಮವಾರ, 12 ಅಕ್ಟೋಬರ್ 2020 (11:41 IST)
ಹಿರಿಯ ರಾಜಕಾರಣಿ ಹಾಗೂ  ಮಾಜಿ ಶಾಸಕ ಕೆ.ಮಲ್ಲಪ್ಪ ಇಂದು ಮುಂಜಾನೆ ದಾವಣಗೆರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ  ಕೆ. ಮಲ್ಲಪ್ಪ ಅವರು,ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದಿಂದ 1983ರಲ್ಲಿ, ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ 1985ರಲ್ಲಿ ಶಾಸಕರಾಗಿ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಜನತಾ ದಳದಿಂದ  ಆಯ್ಕೆಯಾಗಿದ್ದರು.

 ದೇವರಾಜ್ ಅರಸ್ ಹಿಂದುಳಿದ ವರ್ಗಗಳ ನಿಗಮ ಹಾಗೂ ಬಯಲು ಸೀಮೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರುವಾಸಿ ಆಗಿದ್ದ ಮಲ್ಲಪ್ಪನವರು ದಾವಣಗೆರೆಯಲ್ಲಿ ಪ್ರತಿವರ್ಷ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ  ಪಂದ್ಯಾವಳಿ ಆಯೋಜಿಸುತ್ತಿದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ಆರೋಗ್ಯ ಖಾತೆ ಬದಲಾವಣೆ ಬಗ್ಗೆ ಸಚಿವ ಸುಧಾಕರ್ ಹೇಳಿದ್ದೇನು?