Webdunia - Bharat's app for daily news and videos

Install App

ಉಚಿತ ಔಷಧಿ ವಿತರಣೆಯಲ್ಲಿ ಅವ್ಯವಹಾರವಾಗಿಲ್ಲ: ಸಚಿವ ಖಾದರ್

Webdunia
ಶನಿವಾರ, 21 ಮೇ 2016 (15:36 IST)
ಉಚಿತ ಔಷಧಿ ವಿತರಣೆಯಲ್ಲಿ ಭಾರಿ ಪ್ರಮಾಣದ ಅವ್ಯವಹಾರ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಆರೋಗ್ಯ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ, ಯಾವುದೇ ತನಿಖೆಗೂ ಸಿದ್ದವಾಗಿದ್ದೇನೆ ಎಂದು ವಿಕಾಸಸೌಧದಲ್ಲಿ ಹೇಳಿದ್ದಾರೆ.

ಎನ್‌ಎಚ್‌ಎಮ್ ಯೋಜನೆ ಅಡಿಯಲ್ಲಿ 1463 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದೆ. ಈ ಅನುದಾನದಲ್ಲಿ 1248 ಕೋಟಿ ರೂಪಾಯಿ ಹಂಚಿಕೆಯಾಗಿದೆ. ಹೀಗಿದ್ದ ಮೇಲೆ ಇಲಾಖೆಯಲ್ಲಿ 1463 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಯಲು ಹೇಗೆ ಸಾಧ್ಯ ಎಂದು ಖಾದರ್ ಪ್ರಶ್ನಿಸಿದ್ದಾರೆ.
 
ಬಿಬಿಎಂಪಿ ಮಾಜಿ ಸದಸ್ಯ ಎಸ್‌.ಆರ್.ರಮೇಶ್ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಕೆಲವರಿಗೆ ದೇಹ ಬೆಳೆದಿರುತ್ತದೆ. ಹೊರತು ಬುದ್ಧಿ ಬೆಳೆದಿರುವುದಿಲ್ಲ. ನಿಮಾನ್ಸ್‌ನಂತಹ ಸಾಕಷ್ಟು ಆಸ್ಪತ್ರೆಗಳಿವೆ, ರಮೇಶ್ ಅವರು ಸರಿಯಾದ ಚಿಕಿತ್ಸೆ ತೆಗೆದುಕೊಳ್ಳಲಿ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
 
ಉಚಿತ ಔಷಧಿ ಪೂರೈಸುವ ಯೋಜನೆಯಲ್ಲಿ ಅಸ್ಥಿತ್ವದಲ್ಲಿ ಇಲ್ಲದ ಕಂಪನಿಗಳ ಬಿಲ್‌ಗಳ ದಾಖಲಿಸಿ, ಅವ್ಯವಹಾರ ನಡೆಸಿದ್ದಾರೆಂದು ಆರೋಗ್ಯ ಸಚಿವ ಯುಟಿ ಖಾದರ್, ಅರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಇಲಾಖೆ ಆಯುಕ್ತ ಪಿ.ಎಸ್‌.ವಸ್ತ್ರದ ಸೇರಿದಂತೆ 10 ಅಧಿಕಾರಗಳ ವಿರುದ್ಧ ಬಿಬಿಎಂಪಿ ಮಾಜಿ ಸದಸ್ಯ ಎಸ್‌.ಆರ್.ರಮೇಶ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ
Show comments