Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮಹಾಮೈತ್ರಿಯ ಪ್ರಸ್ತಾಪವಿಲ್ಲ– ಸಿದ್ದರಾಮಯ್ಯ

ರಾಜ್ಯದಲ್ಲಿ ಮಹಾಮೈತ್ರಿಯ ಪ್ರಸ್ತಾಪವಿಲ್ಲ– ಸಿದ್ದರಾಮಯ್ಯ
ಹಾಸನ , ಶುಕ್ರವಾರ, 5 ಜನವರಿ 2018 (13:25 IST)
ರಾಜ್ಯದಲ್ಲಿ ಮಹಾಮೈತ್ರಿ ಪ್ರಸ್ತಾಪ ಇಲ್ಲ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಹಾಸನದಲ್ಲಿ ಮಾತನಾಡಿದ ಅವರು, ಸೀತಾರಾಂ ಯಚೂರಿ ಹೇಳಿಕೆ ರಾಷ್ಟ್ರಮಟ್ಟಕ್ಕೆ ಸೀಮಿತ. ರಾಜ್ಯದಲ್ಲಿ ಬಿಜೆಪಿಯನ್ನು ನೇರವಾಗಿ ಎದುರಿಸುತ್ತೇವೆ. ಮತ್ತೆ ಅಧಿಕಾರಕ್ಕೂ ಬರುತ್ತೇವೆ ಎಂದಿದ್ದಾರೆ.
 
ದೀಪಕ್‍ರಾವ್ ಹತ್ಯೆ ಪ್ರಕರಣದ ಹಿಂದೆ ಸಚಿವ ರಮಾನಾಥ ರೈ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಿರುವ ಆರೋಪ ಅತ್ಯಂತ ಬೇಜವಾಬ್ದಾರಿಯಿಂದ ಕೂಡಿದೆ. ಜವಾಬ್ದಾರಿ ಸ್ಥಾನದಲ್ಲಿರುವವರು ಇಂತಹ ಹೇಳಿಕೆಗಳನ್ನು ನೀಡಬಾರದು. ಈ ಪ್ರಕರಣ ಸಂಬಂಧ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ನಂತರ ಸತ್ಯಾಂಶ ಹೊರಗೆ ಬರಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆಗೆ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?