Webdunia - Bharat's app for daily news and videos

Install App

ಸವದಿಗೆ ಡಿಸಿಎಂ ಸ್ಥಾನ ನೀಡಿದ್ದರ ಕುರಿತು ಮಾತನಾಡುವ ನೈತಿಕತೆ ಸಿದ್ದರಾಮಯ್ಯರಿಗಿಲ್ಲ- ಮಾಧುಸ್ವಾಮಿ ಕಿಡಿ

Webdunia
ಶನಿವಾರ, 7 ಸೆಪ್ಟಂಬರ್ 2019 (13:20 IST)
ತುಮಕೂರು : ಲಕ್ಷ್ಮಣ ಸವದಿಗೆ ಡಿಸಿಎಂ ಸ್ಥಾನ ಕೊಟ್ಟಿರುವುದನ್ನು ಟೀಕಿಸುತ್ತಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿರುಗೇಟು ನೀಡಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ವಿಡಿಯೋ ನೋಡಿದ್ದು ನೈತಿಕ ತಪ್ಪು, ಆ ತಪ್ಪಿಗೆ ತಕ್ಕ ಶಾಸ್ತಿಯಾಗಿದೆ. ಹಾಗಂತ ಅದು ದೇಶ ದ್ರೋಹದ ಕೆಲಸವಲ್ಲ. ಸಿದ್ದರಾಮಯ್ಯನವರು ಇದನ್ನೇ ಇಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

 

‘ನಾವೆಲ್ಲಾ ದೇವಸ್ಥಾನ ಎಂದು ಭಾವಿಸುವ ವಿಧಾನಸೌಧದ ಪ್ರಮುಖ ದ್ವಾರದ ಬಾಗಿಲನ್ನು ಕಾಲಿನಿಂದ ಒದಿಯುವ ಮೂಲಕ ಸಿದ್ದರಾಮಯ್ಯನವರು ಪವಿತ್ರ ಸ್ಥಳಕ್ಕೆ ಅಪಚಾರ ಮಾಡಿರಲಿಲ್ಲವೇ ಅಂದಿನ ಪೊಲೀಸ್ ಆಯುಕ್ತರಾಗಿದ್ದ ಶಂಕರ್ ಬಿದರಿ ಅವರ ಕಾಲರ್‍ ಗೆ ಕೈ ಹಾಕಿ ದರ್ಪ ಮೆರೆದಿದ್ದರು. ಅಂಥವರು ಮುಖ್ಯಮಂತ್ರಿ ಆಗಲಿಲ್ಲವೇ. ಹೀಗಿರುವಾಗ ಸವದಿ ಅವರಿಗೆ ಡಿಸಿಎಂ ಸ್ಥಾನ ನೀಡಿದ್ದರ ಕುರಿತು ಮಾತನಾಡುವ ನೈತಿಕತೆ ಸಿದ್ದರಾಮಯ್ಯರಿಗಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments