Select Your Language

Notifications

webdunia
webdunia
webdunia
webdunia

ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ-ನೆರೆ ಸಂತ್ರಸ್ತರಿಗೆ ಸಿಎಂ ಭರವಸೆ

ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ-ನೆರೆ ಸಂತ್ರಸ್ತರಿಗೆ ಸಿಎಂ ಭರವಸೆ
ಬೆಂಗಳೂರು , ಶನಿವಾರ, 10 ಆಗಸ್ಟ್ 2019 (11:05 IST)
ಬೆಂಗಳೂರು : ರಾಜ್ಯದ ಹಲವೆಡೆ ಸುರಿಯುತ್ತಿರುವ ಮಹಾಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿ ಆತಂಕಕ್ಕೀಡಾಗಿರುವ ಜನರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಭರವಸೆಯ ಮಾತಗಳನ್ನು ಹೇಳಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ನೆರೆಹಾನಿ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಿದ್ದಾರೆ. ಅಲ್ಲದೇ ದೆಹಲಿಗೆ ಎರಡು ದಿನ ಹೋಗುವುದಿಲ್ಲ. ಇಲ್ಲೇ ಇರುತ್ತೇನೆ. ಅಧಿಕಾರಿಗಳು ಕೇಂದ್ರದಿಂದ ಹೆಚ್ಚುವರಿ ನೆರವು ಪಡೆಯಲು ವರದಿ ಸಿದ್ಧಪಡಿಸುತ್ತಿದ್ದಾರೆ. ತಾತ್ಕಾಲಿಕ ಪರಿಹಾರ ಬಿಡುಗಡೆಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.


ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಪ್ರವಾಹ ಪರಿಸ್ಥಿತಿ, ಮಳೆ, ನೆರೆ ಹಾನಿ, ರಕ್ಷಣಾ ಕಾರ್ಯ, ಪರಿಹಾರ ಕಾರ್ಯ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನಾರೋಗ್ಯದ ನಡುವೆಯೂ ಇಂದು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿಲಿರುವ ಮಾಜಿ ಸಿಎಂ