Webdunia - Bharat's app for daily news and videos

Install App

ವಿಚ್ಛೇದನದಲ್ಲಿ ಪತಿಯ ಕಷ್ಟ ಕೇಳೋರೇ ಇರಲ್ಲ

Sampriya
ಶುಕ್ರವಾರ, 30 ಆಗಸ್ಟ್ 2024 (16:48 IST)
Photo Courtesy X
ಬೆಂಗಳೂರು: ವ್ಯಕ್ತಿಯೊಬ್ಬ ಮಾಜಿ ಪತ್ನಿ ಮತ್ತು ಮಕ್ಕಳ ಖರ್ಚು ವೆಚ್ಚವಾಗಿ ತಿಂಗಳಿಗೆ 2.35 ಲಕ್ಷ ನೀಡಿದರು, ಆತ ತನ್ನ ಮಕ್ಕಳೊಂದಿಗೆ ಮಾತುಕತೆ ನಡೆಸಲು ಅವಕಾಶ ಮಾಡಿಕೊಡಿ ಎಂದು ಜಡ್ಜ್ ಮುಂದೆ ಬೇಡಿಕೊಂಡಿರುವ ಘಟನೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದಿದೆ.

ವಿಚ್ಚೇಧನದ ಬಳಿಕ ಹೇಳಿಕೊಂಡ ಹಾಗೇ ಜೀವನ ಸುಲಭವಾಗಿರುವುದಿಲ್ಲ. ಕೆಲವೊಂದು ವಿಚ್ಚೇಧನದಲ್ಲಿ ಮಾಜಿ ಪತ್ನಿ ಮತ್ತು ಮಕ್ಕಳ ಖರ್ಚು ವೆಚ್ಚಗಳನ್ನು ಆತನೇ ವಹಿಸಿಕೊಂಡು, ಪ್ರತಿ ತಿಂಗಳು ಅದನ್ನು ಚಾಚೂ ತಪ್ಪದೆ ನಿರ್ವಹಿಸಬೇಕಾಗುತ್ತದೆ.  ಇಂತಹದ್ದೇ ಪ್ರಕರಣದವೊಂದು ಬೆಳಕಿಗೆ ಬಂದಿದ್ದು, ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದಿರುವ ವಿಡಿಯೋ ಭಾರೀ ವೈರಲ್ ಆಗಿದೆ.

ನಾನು ತಿಂಗಳಿಗೆ 3.9ಲಕ್ಷ ಸಂಪಾದನೆ ಮಾಡುತ್ತಿದ್ದೇನೆ. ಅದರಲ್ಲಿ 2.35ಲಕ್ಷ ಮಾಜಿ ಹೆಂಡತಿ ಮತ್ತು ಮಕ್ಕಳ ಖರ್ಚು ವೆಚ್ಚಕ್ಕೆ ನೀಡುತ್ತಿದ್ದಾನೆ. ಒಂದು ವರ್ಷದಲ್ಲಿ 3.15ಕೋಟಿ ಹಣವನ್ನು ಪಾವತಿಸಿದ್ದೇನೆ. ಇಷ್ಟದ್ರೂ ತನ್ನ ಮಕ್ಕಳೊಂದಿಗೆ ಸರಿಯಾಗಿ ಒಂದು ಗಂಟೆಯೂ ಕೂಡಾ ಸಮಯ ಕಳೆಯಲು ಅವಕಾಶವಿಲ್ಲ. ಇದರಿಂದ ಬೇಸರಗೊಂಡ ಅಸಹಾಯಕ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದಾನೆ.
ಈ ವೇಳೆ ಜಡ್ಜ್ ಮುಂದೆ ತಾನು ಮಾಜಿ ಪತ್ನಿಯ ಹಾಗೂ ಮಕ್ಕಳಿಗೆ ತಿಂಗಳಿಗೆ ಖರ್ಚಿಗೆ ಹಣ ನೀಡುತ್ತಿರುವ ದಾಖಲೆಯನ್ನು ಒದಗಿಸಿದ್ದಾನೆ. ಅದಲ್ಲದೆ ಮಕ್ಕಳೊಂದಿಗೆ ಸಮಯ ಕಳೆಯಲು ಅವಕಾಶ ಮಾಡಿಕೊಡಿ ಎಂದು ಬೇಡಿಕೊಂಡಿದ್ದಾನೆ. ಇದಕ್ಕೆ ಒಪ್ಪಿಗೆ ನೀಡಿದ ನ್ಯಾಯಾಧೀಶರು ಸಂಜೆ 3ರಿಂದ 7ರ ವರೆ್ಎ ಮಕ್ಕಳ ಭೇಟಿಗೆ ಅವಕಾಶ ಕಲ್ಪಿಸಿ ಆದೇಶ ನೀಡಿದ್ದಾರೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. ತಂದೆಯ ಅಸಹಾಯಕತೆ ನೋಡಿದವರು ಇಷ್ಟೆಲ್ಲಾ ಪರಿಹಾರ ಕೊಟ್ರೂ ತನ್ನ ಮಕ್ಕಳ ಜತೆ ಸಮಯ ಕಳೆಯಲು ತಂದೆ ಬೇಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬರು ಡಿವೋರ್ಸ್‌ ತುಂಬಾನೇ ದುಬಾರಿ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments