Webdunia - Bharat's app for daily news and videos

Install App

ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ : ಬೊಮ್ಮಾಯಿ

Webdunia
ಮಂಗಳವಾರ, 21 ಮಾರ್ಚ್ 2023 (13:02 IST)
ಹುಬ್ಬಳ್ಳಿ : ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ. ಸತ್ಯ ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ ಜಯ ದೊರೆಯಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಐತಿಹಾಸಿಕ ಸತ್ಯಗಳನ್ನು ಮರೆಮಾಚಲಾಗಿದೆ. ಇತಿಹಾಸವನ್ನು ಭಾರತ ಹಾಗೂ ಕರ್ನಾಟಕದಲ್ಲಿ ತಿರುಚಿರುವ ಕೆಲಸವಾಗಿದೆ. ಆ ಸಂದರ್ಭದಲ್ಲಿ ಯಾರು ಪ್ರಮುಖ ಪಾತ್ರವಹಿಸಿದ್ದರು ಎಂಬುವುದು ಜಗಜ್ಜಾಹೀರಾಗಿದೆ. ಸತ್ಯವನ್ನು ಹೇಳಿದರೆ ಇವರಿಗೆ ತಡೆಯಲು ಆಗುವುದಿಲ್ಲ ಎಂದು ಟೀಕಿಸಿದರು. 

ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರು ರಾಜ್ಯಕ್ಕೆ ಭೇಟಿ ನೀಡಿರುವುದರಿಂದ ಯವುದೇ ಪರಿಣಾಮ ಬೀರಲ್ಲ. ಇವರು ಭಾರತ್ ಜೋಡೋ ಯಾತ್ರೆಯನ್ನು ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಲಿಲ್ಲ. ಸೋಮವಾರ ಹುಬ್ಬಳ್ಳಿಯಲ್ಲಿ ಮಾಡಿದ ಘೋಷಣೆಗಳಿಂದ ಯಾವುದೇ ಪರಿಣಾಮವಾಗುವುದಿಲ್ಲ.

ಅವರು ಕಳೆದ ಬಾರಿ ರಾಜ್ಯಕ್ಕೆ ಬಂದಿರುವುದಕ್ಕೆ ಹಾಗೂ ಈ ಸಲ ಬಂದಿರುವುದಕ್ಕೆ ಬಹಳಷ್ಟು ವ್ಯತ್ಯಾಸಗಳಿವೆ. ಲಂಡನ್ ವಿಶ್ವವಿದ್ಯಾಲಯದಲ್ಲಿ ಅವರು ಮಾತನಾಡಿರುವುದು ದೇಶ ವಿರೋಧಿಯಾಗಿದೆ. ಇಡಿ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಈ ಬಗ್ಗೆ ಖಂಡನೆಯಾಗಿದೆ. ಅವರ ಮಾತಿಗೆ ಜನರು ಯಾವುದೇ ಬೆಲೆಯನ್ನು ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.  ಸಿದ್ದರಾಮಯ್ಯನವರು ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಆಶ್ವಾಸನೆಗಳನ್ನು ನೀಡಿದ್ದು, ಇಂದಿಗೂ ಈಡೇರಿಸಲಿಲ್ಲ. ಇದು ಅವರ ಟ್ರ್ಯಾಕ್ ರೆಕಾರ್ಡ್.

ರಾಜಸ್ಥಾನ ಹಾಗೂ ಛತ್ತೀಸ್ಗಢದಲ್ಲಿ ಘೋಷಣೆ ಮಾಡಿದ್ದನ್ನು ಅವರು ಈಡೇರಿಸಲಿಲ್ಲ. ಛತ್ತೀಸ್ಗಡದಲ್ಲಿ ಪ್ರತಿ ಮನೆಗೆ ಒಂದು ಸಾವಿರ ರೂ. ನೀಡುವುದಾಗಿ ಹೇಳಿದ್ದರು. ನಾಲ್ಕು ವರ್ಷ ನೀಡದೇ ಕೊನೆಯ ವರ್ಷ ಕೊಡಲು ಓಡಾಡಿದರು. ಈ ರೀತಿಯಾಗಿ ಜನರನ್ನು ಯಾಮಾರಿಸುತ್ತಾರೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಬರೀ ವಿಸಿಟಿಂಗ್ ಕಾರ್ಡ್ ಎಂದು ವ್ಯಂಗ್ಯವಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments