Webdunia - Bharat's app for daily news and videos

Install App

ಬ್ರಿಗೇಡ್‌ನಿಂದ ಹಿಂದೆ ಸರಿಯವ ಪ್ರಶ್ನೆಯೇ ಇಲ್ಲ: ಯಡಿಯೂರಪ್ಪಗೆ ಈಶ್ವರಪ್ಪ ಟಾಂಗ್

Webdunia
ಶನಿವಾರ, 8 ಅಕ್ಟೋಬರ್ 2016 (19:20 IST)
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿಯವ ಪ್ರಶ್ನೆಯೇ ಇಲ್ಲ ಎಂದು ವಿಧಾನ ಸಭೆ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಮ್ಮ ಬೆಂಬಲಿಗರ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. 
 
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಕೆ.ಎಸ್.ಈಶ್ವರಪ್ಪನವರೂ ಹಿಂದೆ ಸರಿದಿದ್ದಾರೆ ಎನ್ನುವುದು ಸುಳ್ಳು ಸುದ್ದಿ. ಬ್ರಿಗೇಡ್ ಕಾರ್ಯಚರಣೆಯನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಬ್ರಿಗೇಡ್ ನಿಲ್ಲಿಸಲು ಅದೇನು ಕೊಳಾಯಿ ನೀರೆ ಎಂದು ಬ್ರಿಗೇಡ್ ಕಾರ್ಯದರ್ಶಿ ಮುಕಡಪ್ಪ ಸ್ಪಷ್ಟಪಡಿಸಿದ್ದಾರೆ. 
 
ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್ ಅವರು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಿಗೆ ತಾಕೀತು ಮಾಡಿದರು. ಹೀಗಾಗಿ ಇಂದು ರಾಯಣ್ಣ ಬ್ರಿಗೇಡ್‌ನ ತುರ್ತು ಸಭೆ ಕರೆಯಲಾಗಿತ್ತು. 
 
ಸಭೆ ಬಳಿಕ ಮಾಧ್ಯಮದವರಿಗೆ ಹೇಳಿಕೆ ಕೊಡಲು ನಿರಾಕರಿಸಿರುವ ಈಶ್ವರಪ್ಪನವರು, ಯಾವುದೇ ಕಾರಣಕ್ಕೂ ಬ್ರಿಗೇಡ್‌ನಿಂದ ಹಿಂದೇ ಸರಿಯಲ್ಲ ಎಂದು ತಮ್ಮ ಬೆಂಬಲಿಗರ ಮೂಲಕ ಬಿಜೆಪಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments