Select Your Language

Notifications

webdunia
webdunia
webdunia
webdunia

8 ಶಾಸಕರು ರಾಜೀನಾಮೆ ಕೊಡೋದೆಲ್ಲ ಸುಳ್ಳು : ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ
ಬೆಂಗಳೂರು , ಭಾನುವಾರ, 19 ಜೂನ್ 2016 (18:46 IST)
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಎಂಟು ಮಂದಿ ಶಾಸಕರು ರಾಜೀನಾಮೆ ಕೊಡೋದೆಲ್ಲ ಸುಳ್ಳು ಎಲ್ಲಾ ಶಾಸಕರ ಜೊತೆ ನಾನು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಸಂಪ್ರದಾಯದಂತೆ ಔಪಚಾರಿಕವಾಗಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಕೇವಲ ಟೀ ಕುಡಿದು ಹೊರಬಂದಿದ್ದೇವೆ ಎಂದರು.
 
ಪಕ್ಷದಲ್ಲಿ ಯಾವುದೇ ಭಿನ್ನಮತ ಚಟುವಟಿಕೆ ನಡೆಯುತ್ತಿಲ್ಲ. ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಕೈಬಿಟ್ಟ ಸಚಿವರ ಆಕ್ರೋಶ ಸಹಜವಾಗಿರುತ್ತದೆ.ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೋಪೋದ್ರಿಕ್ತ ಘಟನೆಗಳು ನಡೆಯುತ್ತವೆ ಎಂದು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಸಂಪುಟ ಪುನಾರಚನೆ ಮಾಡಲಾಗಿದೆ. ಸಚಿವರನ್ನು ಕೈಬಿಡಲಾಗಿದೆ ಎಂದರೆ ಅವರು ಅಸಮರ್ಥರು ಎಂದರ್ಥವಲ್ಲ. ಅವರಿಗೆ ಪಕ್ಷದ ಬೇರೆ ಕೆಲಸಗಳನ್ನು ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ: ಕಾಗೋಡು