Webdunia - Bharat's app for daily news and videos

Install App

ರೋಗಿಗಳ ಅವಶ್ಯಕತೆಗೆ ತಕ್ಕಂತೆ ಇಲ್ಲ ಚರ್ಮದ ದಾಸ್ತಾನು,,!

Webdunia
ಮಂಗಳವಾರ, 21 ಮಾರ್ಚ್ 2023 (19:22 IST)
ಅದು ರಾಜ್ಯದ ಪ್ರಪ್ರಥಮ ಸ್ಕಿನ್ ಬ್ಯಾಂಕ್. ರಾಜ್ಯ ರಾಜಧಾನಿಯ ಕೀರ್ತಿಯನ್ನ ಎತ್ತಿಹಿಡಿದಿದ್ದ ಚರ್ಮ ನಿಧಿ. ಆದ್ರೆ ಇದೀಗ ಆ ಸ್ಕಿನ್ ಬ್ಯಾಂಕ್ಗೆ ಚರ್ಮದ ಅಭಾವ ಎದುರಾಗಿಬಿಟ್ಟಿದೆ. ಅದೆಷ್ಟೋ ಸುಟ್ಟಗಾಯಗಳಿಂದ ಬಳಲುತ್ತಿದ್ದವರಿಗೆ ಸಂಜೀವಿನಿಯಾಗಿದ್ದ ಚರ್ಮ ನಿಧಿ ಇದೀಗ ಚರ್ಮದ ಕೊರತೆ ಎದುರಿಸುತ್ತಿದೆ. ಸುಟ್ಟಗಾಯಗಳಿಂದ ಬಳಲಿ ಬಂದವರಿಗೆ ಸಂಜೀವಿನಿಯಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ಚರ್ಮನಿಧಿಗೆ ಚರ್ಮದ ಕೊರತೆ ಎದುರಾಗಿದೆ. 2016 ರಲ್ಲಿ ಆರಂಭವಾದ ರಾಜ್ಯದ ಪ್ರಪ್ರಥಮ ಚರ್ಮನಿಧಿ ಇದಾಗಿದ್ದು, ಇದೀಗ ರೋಗಿಗಳಿಗೆ ಸಾಕಾಗುವಷ್ಟು ಚರ್ಮ ಸ್ಟಾಕ್ ಇಲ್ಲದೇ ಇರೋದು ವೈದ್ಯರಿಗೆ ಆತಂಕ ತಂದಿದೆ. ಬೇಸಿಗೆ ಆರಂಭದಲ್ಲೇ ಚರ್ಮದ ಕೊರತೆ ಎದುರಾಗಿರೋದು ಆತಂಕವನ್ನ ಮತ್ತಷ್ಟು ಹೆಚ್ಚಿಸಿದೆ. ಬೆಂಕಿ ಅವಘಡಗಳು, ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ನೀಡಲು ಚರ್ಮದ ಕೊರತೆ ಇದೆ ಅಂತಾ ಸ್ಕಿನ್ ಬ್ಯಾಂಕ್ ವೈದ್ಯರ ತಂಡ ಕಳವಳ ವ್ಯಕ್ತಪಡಿಸಿದೆ.

ಇನ್ನು ಈ ಚರ್ಮ ನಿಧಿ ದೇಶದಲ್ಲೇ ಮೂರನೇ ಕೇಂದ್ರವಾಗಿದ್ದು, ಮುಂಬೈನ ರಾಷ್ಟ್ರೀಯ ಸುಟ್ಟಗಾಯಗಳ ಕೇಂದ್ರ ಮತ್ತು ಚೆನ್ನೈನ ರೈಟ್ಸ್ ಆಸ್ಪತ್ರೆಯಲ್ಲಿ ಈಗಾಗಲೇ ಚರ್ಮ ನಿಧಿ ಕಾರ್ಯ ನಿರ್ವಹಿಸುತ್ತಿವೆ. ಆ್ಯಸಿಡ್ ದಾಳಿ, ಆಕಸ್ಮಿಕ ಬೆಂಕಿ ಅವಘಡಗಳಿಂದ ಸುಟ್ಟು ಕುರೂಪಗೊಂಡ ದೇಹಕ್ಕೆ ಹೊಸ ರೂಪ ನೀಡುವ ಮೂಲಕ ರೋಗಿಯ ಜೀವ ಉಳಿಸಲು ಈ ಚರ್ಮ ನಿಧಿ ವರದಾನವಾಗಿದೆ. ಇತ್ತ ಚರ್ಮದಾನಿಗಳು ಇಳಿಕೆಯಾಗ್ತಿರೋದು, ಸಂಗ್ರಹಿಸಿದ ಚರ್ಮವನ್ನ ಬಳಕೆಗೆ ಯೋಗ್ಯ ಮಾಡುವ ಪ್ರಕ್ರಿಯೆಗೆ ಸಮಯ ಹಿಡಿಯುತ್ತಿರೋದು ಚರ್ಮದ ಕೊರತೆಗೆ ಕಾರಣವಾಗ್ತಿದೆ. ಇನ್ನು ವ್ಯಕ್ತಿ ಸತ್ತ ಬಳಿಕ 6 ಗಂಟೆಯ ಒಳಗೆ ಚರ್ಮ ಸಂಗ್ರಹ ಮಾಡಬೇಕಿದ್ದು, ಈ ವೇಳೆ ಹಲವರಿಗೆ  ಚರ್ಮದಾನದ ಬಗ್ಗೆ ಅರಿವು ಇಲ್ಲದೇ ಇರೋದು ಕೂಡ ಚರ್ಮದ ಅಭಾವಕ್ಕೆ ಕಾರಣವಾಗ್ತಿದೆ.

ಸದ್ಯ ಚರ್ಮನಿಧಿಯಿಂದ ಆ್ಯಸಿಡ್ ದಾಳಿಗೆ ಒಳಗಾದವರು, ಸುಟ್ಟಗಾಯಗಳಿಂದ ಒಳಲುತ್ತಿರೋರಿಗೆ ಚಿಕಿತ್ಸೆ ನೀಡಲಾಗ್ತಿದೆ. ಆದ್ರೆ ಚರ್ಮದಾನದ ಬಗ್ಗೆ ಅರಿವು ಇಲ್ಲದೇ ಇರೋದರಿಂದ ದಾನಿಗಳ ಸಂಖ್ಯೆ ಕೂಡ ಇಳಿಮುಖವಾಗ್ತಿದೆ. ಸದ್ಯ ಸಾವಿರಾರು ಜನರ ಚಿಕಿತ್ಸೆಗೆ ಬಳಕೆಯಾಗ್ತಿದ್ದ ರಾಜ್ಯದ ಮೊದಲ ಚರ್ಮನಿಧಿಗೆ ಎದುರಾಗಿರೋ ಸಮಸ್ಯೆ ದೂರ ಮಾಡಲು ಜನರು ಜಾಗೃತರಾಗಬೇಕಿದೆ. ಸತ್ತು ಮಣ್ಣುಸೇರುವ ದೇಹ, ಬದುಕಿರುವವರ ಬಾಳಿಗೆ ಬೆಳಕು ನೀಡಲಿ ಅನ್ನೋದೆ ನಮ್ಮ ಆಶಯ 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments