Webdunia - Bharat's app for daily news and videos

Install App

ಕುರಿ ಸತ್ತರೆ ಪರಿಹಾರ ಇಲ್ಲ.. ಡಿಸಿ ಕಾರು ಪೆಟ್ರೋಲ್ಗೆ ಹಣ ಇಲ್ಲ: ಯತ್ನಾಳ್ ವಾಗ್ದಾಳಿ

Webdunia
ಭಾನುವಾರ, 10 ಸೆಪ್ಟಂಬರ್ 2023 (09:05 IST)
ಕೊಪ್ಪಳ : ಗ್ಯಾರಂಟಿ ಯೋಜನೆಯಿಂದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ ಆಗಿದ್ದು, ಕುರಿ ಸತ್ತರೆ ಪರಿಹಾರ ನೀಡುತ್ತಿಲ್ಲ. ಕಾರವಾರ ಡಿಸಿ ಕಾರಿಗೆ ಡೀಸೆಲ್ ಹಾಕಲು ಹಣ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರಿಗೆ ನೀಡಲು ಸರ್ಕಾರದ ಬಳಿ ಅನುದಾನ ಇಲ್ಲ. ಶಾಸಕರಿಗೆ ಅನುದಾನ ನೀಡಿದರೆ ಮಾತ್ರ, ಅವರು ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯ. ಇದರಿಂದ ಶಾಸಕರಿಗೆ ಗ್ರಾಮೀಣ ಪ್ರದೇಶಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಆಗುತ್ತಿಲ್ಲ. ಇದರಿಂದ ಶಾಸಕರಿಗೆ ಅಸಮಾಧಾನ ಹೆಚ್ಚಾಗಿದೆ. ನಮ್ಮ ಪಾರ್ಟಿ ಒಡೆಯಬೇಕು ಎನ್ನುವ ಇವರದ್ದೇ ಪಾರ್ಟಿ ಒಡೆದು ಹೋಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ನಲ್ಲಿ ಅತೃಪ್ತ ಆತ್ಮ ಹೆಚ್ಚಾಗಿವೆ. ಕೆಲವರಿಗೆ ಮಂತ್ರಿ ಮಾಡಿಲ್ಲ ಅಂತ ಅಸಮಾಧಾನ ಇದೆ.

ಹಲವರಿಗೆ ಅನುದಾನ ನೀಡಿಲ್ಲ ಎಂದು ಬೇಸರಗೊಂಡಿದ್ದಾರೆ. ಇವೆಲ್ಲ ಅವರ ಪಕ್ಷದ ಅತೃಪ್ತ ಆತ್ಮಗಳಾಗಿವೆ. ಇಂಥ ಅತೃಪ್ತ ಆತ್ಮ ಕೊಪ್ಪಳದಲ್ಲಿಯೂ ಒಂದಿದೆ. ವಿನಯ ಕುಲಕರ್ಣಿ, ಬಸವರಾಜ ರಾಯರಡ್ಡಿ ಅಂತಹ ಅತೃಪ್ತ ಆತ್ಮಗಳಿಂದ ಸರ್ಕಾರ ಏನಾಗುತ್ತೋ ಗೊತ್ತಿಲ್ಲ ಎಂದರು.

ಸರ್ಕಾರ ಬೀಳಬಹುದು ಎಂಬ ಬಗ್ಗೆ ಕಾಂಗ್ರೆಸ್ನವರಿಗೆ ಭಯ ಇದೆ. ಅದಕ್ಕೆ ಅವರು ಬಿಜೆಪಿಗರು ಪಕ್ಷ ಬಿಡುತ್ತಾರೆ ಎಂದು ಹೇಳುತ್ತಿದ್ದಾರೆ. ಬಿಜೆಪಿಗರು ಹೋಗಿ ಅಲ್ಲಿ ಏನು ಮಾಡುವವರಿದ್ದಾರೆ? ಬಾಗಿಲು ಕಾಯಬೇಕು. ಅದು ಬಿಟ್ಟು ಮತ್ತೇನೂ ಸಾಧ್ಯವಿಲ್ಲ. ಮುಂದೆ ಈ ಸರ್ಕಾರ ಬಿದ್ದು ಹೋದರೆ, ಬಿಜೆಪಿ ಬಿಟ್ಟವರು ಏನು ಮಾಡುತ್ತಾರೆ? ಅದಕ್ಕೆ ಯಾರೂ ಬಿಜೆಪಿ ಬಿಡುವುದಿಲ್ಲ ಎಂಬ ವಿಶ್ವಾಸ ಇದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments