Select Your Language

Notifications

webdunia
webdunia
webdunia
webdunia

‘ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ'

‘ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ'
bangalore , ಬುಧವಾರ, 13 ಏಪ್ರಿಲ್ 2022 (19:25 IST)
ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ನಾನು ರಾಜೀನಾಮೆ ಕೊಡುವ ಮಾತೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಂತೋಷ್‌ ಯಾವುದೇ ಡೆತ್‌ ನೋಟ್‌ ಬರೆದು ಸೂಸೈಡ್ ಮಾಡಿಕೊಂಡಿಲ್ಲ. ಡೆತ್‌ ನೋಟ್‌ ಬರೆಯದೇ ಇದ್ರೂ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ವಾಟ್ಸ್​ ಆ್ಯಪ್ ಸಂದೇಶದ ಬಗ್ಗೆ ಸಮಗ್ರ ತನಿಖೆ ಆಗ್ಬೇಕು. ನಮ್ಮ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ಜೊತೆಗೆ ವರ್ಕ್‌ ಆರ್ಡರ್‌ ಇಲ್ಲದೆ ಕಾಮಗಾರಿ ಮಾಡೋ ಹಾಗಿಲ್ಲ. ಪ್ರಕರಣ ಸಂಬಂಧ ಸಿಎಂ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ಕಟೀಲ್​ಗೆ ಮಾಹಿತಿ ನೀಡಿದ್ದೇನೆ. ಕಾಂಗ್ರೆಸ್‌ನವರು ಯಾವುದೇ ರೀತಿಯ ದಾಖಲೆಗಳಿಲ್ಲದೆ ಆರೋಪ ಮಾಡ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ..ನಾನು ಒಮ್ಮೆಯೂ ಸಂತೋಷ್‌ ಮುಖ ನೋಡಿಲ್ಲ, ಗಣಪತಿ ಕೇಸ್‌ಗೂ, ಈ ಕೇಸ್‌ಗೂ ತುಂಬಾ ವ್ಯತ್ಯಾಸವಿದೆ ಎಂದು ಶಿವಮೊಗ್ಗದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಚೋದನಕಾರಿ ಭಾಷಣ: ಅಕ್ಬರುದ್ದೀನ್‌ ಓವೈಸಿ ಅರೆಸ್ಟ್‌