Publish Date: Sat, 23 Apr 2022 (19:03 IST)
Updated Date: Sat, 23 Apr 2022 (19:06 IST)
ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಮಹಾಂತೇಶ್ ಪಾಟೀಲ್ನನ್ನು ಬಂಧಿಸಿದ್ದಾರೆ. ಇನ್ನೂ ಇವರ ಸಹೋದರ ಆರ್.ಡಿ. ಪಾಟೀಲ್ ಶಾಮೀಲಾಗಿರುವ ಆರೋಪ ಕೇಳಿ ಬಂದಿದ್ದು, ಆತನನ್ನೂ ಬಂಧಿಸಲಾಗಿದೆ. ಮಹಾಂತೇಶ್ ಪಾಟೀಲ್ ಮತ್ತು ಆತನ ಸಹೋದರ ಆರ್.ಡಿ. ಪಾಟೀಲ್ ಮುಂದಿನ ಚುನಾವಣೆ ಗುರಿಯಿಟ್ಟುಕೊಂಡು ತಾಲೂಕಿನಲ್ಲಿ ನಾನಾ ಸಾಮಾಜಿಕ ಸೇವಾ ಕಾರ್ಯಗಳನ್ನು ಆಯೋಜಿಸುತ್ತಿದ್ದರು. ಇಂದು ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್ನಲ್ಲಿ 101 ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದ.