Webdunia - Bharat's app for daily news and videos

Install App

ಮೃತದೇಹ ತರುವ ಪ್ರಯತ್ನ ನಡೆದಿದೆ: ಬೊಮ್ಮಾಯಿ

Webdunia
ಬುಧವಾರ, 2 ಮಾರ್ಚ್ 2022 (11:08 IST)
ಬೆಂಗಳೂರು : ನವೀನ್ ಡ್ರೆಸ್ ಹೋಲುವ ಫೋಟೋ ಬಂದಿದೆ. ಈ ಕುರಿತು ವಿದೇಶಾಂಗ ಸಚಿವರ ಜೊತೆ ಮಾತನಾಡಿ, ಮೃತದೇಹವನ್ನು ತರುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ಡ್ರೆಸ್ ಹೋಲುವ ಫೋಟೋವನ್ನು ಅವರ ಸ್ನೇಹಿತರು ಕಳಿಸಿದ್ದಾರೆ. ಈ ಬಗ್ಗೆ ಉಕ್ರೇನ್ ಭಾರತೀಯ ರಾಯಭಾರಿ ಕಚೇರಿಗೆ ಮಾತನಾಡುತ್ತೇನೆ. ಮೃತದೇಹವನ್ನು ತೆಗೆದುಕೊಂಡು ಬರಲು ಎಲ್ಲಾ ಪ್ರಯತ್ನವನ್ನು ನಡೆಸುತ್ತಿದ್ದೇವೆ ಎಂದರು.

ಕನ್ನಡಿಗರು ವಾಪಸ್ ತರಲು ವೇಗ ಕೊಡುತ್ತೇವೆ. 2-3 ದಿನಗಳಲ್ಲಿ 26 ವಿಮಾನಗಳು ಬರಲಿವೆ. ಇದರಲ್ಲಿ ಕನ್ನಡಿಗರನ್ನು ಶೀಘ್ರವಾಗಿ ಕರೆಸಲು ಕ್ರಮ ತೆಗೆದುಕೊಳ್ಳುತ್ತೇವೆ. ಯುದ್ಧ ನಡೆಯುತ್ತಿರುವುದರಿಂದ ಈ ಸಮಸ್ಯೆ ಆಗುತ್ತಿದೆ. ಭಾರತ ಸರ್ಕಾರ ಪ್ಲ್ಯಾನ್ ಮಾಡಿ ವಾರ್ ಝೋನ್ನಿಂದ ಬೇರೆ ಬೇರೆ ಕಡೆ ಕರೆಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ. ಆದರೆ ನಮ್ಮ ಮೊದಲ ಆದ್ಯತೆ ಅವರ ಮೃತದೇಹವನ್ನು ತರಿಸುವುದಾಗಿದೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು, ಕುಟುಂಬ ಕೂಡಾ ದುಃಖದಲ್ಲಿ ಇದೆ. ಶವ ತರಿಸಿಕೊಡುವಂತೆ ಅವರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments