Webdunia - Bharat's app for daily news and videos

Install App

ದರ್ಶನ್‌ ಪ್ರಕರಣದಲ್ಲಿ ಯಾವ ಪ್ರಭಾವವೂ ನಡೆದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Sampriya
ಶುಕ್ರವಾರ, 14 ಜೂನ್ 2024 (19:05 IST)
ಮೈಸೂರು: ನಟ ದರ್ಶನ್‌ ಪ್ರಕರಣದಲ್ಲಿ ಪ್ರಭಾವ ಬೀರಲು ನನ್ನ ಬಳಿ ಯಾರೂ ಬಂದಿಲ್ಲ. ಪ್ರಭಾವ ಬೆಳೆಸಲು ನನ್ನ ಬಳಿ ಬಂದಿದ್ದರು ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ದರ್ಶನ್‌ ಅವರನ್ನು ವಿಚಾರಣೆ ನಡೆಸುತ್ತಿರುವ ಠಾಣೆಗೆ ಶಾಮಿಯಾನ ಕಟ್ಟಿದ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪೊಲೀಸರು ಏನು ಮಾಡಿದ್ದಾರೆ ಅದು ನನಗೆ ಗೊತ್ತಿಲ್ಲ. ಅವರು ನಮ್ಮನ್ನ ಕೇಳಿ ಏನನ್ನೂ ಮಾಡುವುದಿಲ್ಲ. ಸಾರ್ವಜನಿಕರಿಗೆ ಅದರಿಂದ ತೊಂದರೆಯಾಗಿರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಸಾರ್ವಜನಕರು ನನಗೆ ದೂರು ಕೊಟ್ಟಿಲ್ಲ. ಆ ಬಗ್ಗೆ ದೂರು ಬಂದಾಗ ನೋಡುತ್ತೇನೆ ಎಂದರು.

ಯಡಿಯೂರಪ್ಪ ಪ್ರಕರಣದಲ್ಲಿ ಕೋರ್ಟ್‌ನ ಆದೇಶದ ಬಗ್ಗೆ ನಾನು ಮಾತನಾಡುವುದಿಲ್ಲ. ಕಾಂಗ್ರೆಸ್ ಯಾವತ್ತೂ ದ್ವೇಷದ ರಾಜಕಾರಣ ಮಾಡಲ್ಲ. ಕಾನೂನು ರೀತಿ ಕೆಲಸ ಮಾಡುತ್ತೇವೆ. ಕೋರ್ಟ್ ಆದೇಶಕ್ಕೆ ತಲೆಬಾಗುತ್ತೇವೆ. ವಿರೋಧ ಪಕ್ಷಗಳ ಎಲ್ಲಾ ಆರೋಪಗಳಿಗೆ ನಾನು ಉತ್ತರ ಕೊಡಬೇಕು ಅಂಥ ಏನಿಲ್ಲ. ನಾನು ಮತ್ತೆ ಮತ್ತೆ ಸ್ಪಷ್ಟಪಡಿಸುತ್ತೇನೆ ಎಂದರು.

ಮತಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ಯಾವುದೇ ಕಾರಣಕ್ಕೂ ಅದು ನಿಲ್ಲುವುದಿಲ್ಲ. ಪುನರ್ ಪರಿಶೀಲನೆ ಆಗುವುದಿಲ್ಲ. ವೋಟಿಗಾಗಿ ನಾವು ಅದನ್ನ ಜಾರಿಗೆ ತಂದಿಲ್ಲ. ಬಡವರಿಗಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ‌ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments