Select Your Language

Notifications

webdunia
webdunia
webdunia
webdunia

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬರಗಾಲವೇ ಬರಲ್ಲ : ಅಶೋಕ್

ಬಿಜೆಪಿ ಅಧಿಕಾರಕ್ಕೆ  ಬಂದ್ರೆ ಬರಗಾಲವೇ ಬರಲ್ಲ : ಅಶೋಕ್
ಬಳ್ಳಾರಿ , ಮಂಗಳವಾರ, 27 ಸೆಪ್ಟಂಬರ್ 2022 (07:07 IST)
ಬಳ್ಳಾರಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೇ ಹೆಚ್ಚು ಮಳೆ ಬರುತ್ತದೆ. ಇದರಿಂದಾಗಿ ತಮಿಳುನಾಡಿನಿಂದ ಕಾವೇರಿ ಕಾಟ ಕೂಡ ತಪ್ಪಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಕೂಡ್ಲಿಗಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದರೇ ಬರಗಾಲವೇ ಬರುವುದಿಲ್ಲ. ಅಷ್ಟೇ ಅಲ್ಲದೇ ಅತಿ ಹೆಚ್ಚು ಮಳೆ ಬರುವುದರಿಂದಾಗಿ ತಮಿಳುನಾಡು ಬೇಡ ಹೇಳುವಷ್ಟು ನೀರು ಬಿಟ್ಟಿದ್ದೇವೆ ಎಂದರು.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, ಕಂದಾಯ ದಾಖಲೆ ಮನೆ ಬಾಗಿಲಿಗೆ ಸಲ್ಲಿಸುವ ಕೆಲಸ ಮಾಡುತ್ತಿದ್ದೇವೆ.

ವಿಜಯನಗರ ಜಿಲ್ಲೆ ಮಾಡಲು ಮೊದಲು ಕಂದಾಯ ಇಲಾಖೆ ಶಿಫಾರಸು ಮಾಡಿದ್ದೆವು ಎಂದ ಅವರು, ಭೂಕಬಳಿಕೆ ಕಾನೂನು ಬದಲಾವಣೆ ಮಾಡಿದ್ದೇವೆ. ರೈತರ ಮೇಲೆ ಕೇಸ್ ಹಾಕುವುದಿಲ್ಲ ಎಂದು ಭರವಸೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನವರಾತ್ರಿಗೆ KSRTC ಬಂಪರ್ ಆಫರ್