Webdunia - Bharat's app for daily news and videos

Install App

ತಮ್ಮ ಸ್ಥಾನವೇ ಅಲುಗಾಡುತ್ತಿರುವಾಗ ಸಿದ್ದರಾಮಯ್ಯ ಮೇಲೆ ಆರೋಪ ಮಾಡುತ್ತಿದ್ದಾರೆ

Sampriya
ಶುಕ್ರವಾರ, 30 ಆಗಸ್ಟ್ 2024 (19:54 IST)
Photo Courtesy X
ಬೆಳಗಾವಿ: ಯತ್ನಾಳ, ರಮೇಶ ಜಾರಕಿಹೊಳಿ, ಆರ್‌.ಅಶೋಕ, ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ಬಿಎಸ್ ವಿಜಯೇಂದ್ರ ನಾಯಕತ್ವ ಒಪ್ಪಿಕೊಂಡಿಲ್ಲ. ಆದ್ದರಿಂದ ಅವರ ಗಾಡಿ ಬಹಳ ದಿನ ಓಡೋದಿಲ್ಲ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ ದೂರಿದರು.

ತಮ್ಮ ಸ್ಥಾನವೇ ಅಲುಗಾಡುತ್ತಿರುವಾಗ ಸಿದ್ದರಾಮಯ್ಯ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಡಾದಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ತಪ್ಪಿಲ್ಲ ಎಂಬುದು ನಮಗೆ ಖಾತ್ರಿಯಾಗಿದೆ. ನ್ಯಾಯಾಲಯವೂ ಪ್ರಕರಣ ಪಕ್ಕಕ್ಕಿರಿಸಲಿದೆ. ಆಗ ಬಿಜೆಪಿಯರು ಪೇಚಾಟಕ್ಕೆ ಸಿಲುಕುತ್ತಾರೆ. ಸಿದ್ದರಾಮಯ್ಯ ಮತ್ತಷ್ಟು ಪ್ರಬಲ ನಾಯಕರಾಗಿ ಹೊರಹೊಮ್ಮುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಇನ್ನೊಬ್ಬ ದಲಿತ ನಾಯಕನ್ನೇ ಎತ್ತಿಕಟ್ಟಿದೆ. ಹೀಗೆ ಒಂದು ಸಮಾಜವನ್ನು ತುಳಿಯಲಿ ಅದೇ ಸಮಾಜದ ನಾಯಕರನ್ನು ಎತ್ತಿಕಟ್ಟುವುದು ಬಿಜೆಪಿ, ಆರ್‌ಎಸ್‌ಎಸ್‌ ಅಜೆಂಡ. ಲಿಂಗಾಯತ ನಾಯಕರನ್ನೇ ಎತ್ತಿಕಟ್ಟಿ ಯಡಿಯೂರಪ್ಪ ಅವರನ್ನು ಬಲಿ ಕೊಟ್ಟಿದ್ದು ಇದೇ ತಂತ್ರದಿಂದ ಎಂದು ದೂರಿದರು.

ಛಲವಾದಿ ನಾರಾಯಣಸ್ವಾಮಿ ಅವರಿಗೆ ನಾನು ಅವಮಾನ ಮಾಡಿಲ್ಲ. ಅವರು ಮೈಸೂರು ಬಳಿ ಸಾಫ್ಟ್‌ವೇರ್‌ ತಂತ್ರಜ್ಞಾನ ಅಭಿವೃದ್ಧಿಪಡಿಸಲು 8029 ಚದರ್‌ ಮೀಟರ್ ಭೂಮಿ ಪಡೆದಿದ್ದಾರೆ. ಅಲ್ಲಿ ಶೆಡ್‌ ಮಾತ್ರ ಕಟ್ಟಿರುವುದರಿಂದ ನಾನು ಶೆಡ್ ಗಿರಾಕಿ ಎಂದಿದ್ದೇನೆ ಅಷ್ಟೇ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಮುಂದಿನ ಸುದ್ದಿ
Show comments