Webdunia - Bharat's app for daily news and videos

Install App

ಹಾವು ಬಿಡ್ತೇವೆ, ಬಿಡ್ತೇವೆ ಅಂತ ಹೇಳ್ತಿದ್ದಾರೆ ಯಾವ ಹಾವು ಬಿಡ್ತಾರೋ ನೋಡೋಣ: ಜಾರ್ಜ್

Webdunia
ಶನಿವಾರ, 31 ಜನವರಿ 2015 (16:12 IST)
ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕರು ಹಾವು ಬಿಡುತ್ತೇವೆ, ಬಿಡುತ್ತೇವೆ ಎಂದು ಹೇಳುತ್ತಿದ್ದಾರೆ. ಅದೇನು ಕೆರೆ ಹಾವು ಬಿಡ್ತಾರೋ ಅಥವಾ ನಾಗರ ಹಾವೇ ಬಿಡುತ್ತಾರೋ ನಾವೂ ನೋಡ್ತೇವೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ವ್ಯಂಗ್ಯವಾಡಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹಲವು ದಾಖಲೆಗಳು ನಮ್ಮ ಬಳಿ ಇದ್ದು, ಎಲ್ಲವನ್ನೂ ಸಂಗ್ರಹಿಸಿದ್ದೇವೆ. ಸಿಎಂ ಸಿದ್ದರಾಮಯ್ಯನವರು 119 ಎಕರೆಗೂ ಅಧಿಕ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದಾರೆ. ಆದರೆ ಈ ಭೂಮಿಯು ಸರ್ಕಾರಕ್ಕೆ ಸೇರಬೇಕಿದ್ದ ಆಸ್ತಿಯಾಗಿದೆ. ಎಂದು ಹೇಳುತ್ತಾ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ ಅವರು ಅಂದಿನಿಂದಲೂ ಹೇಳುತ್ತಿದ್ದಾರೆ ಹಾವು ಬಿಡುತ್ತೇವೆ, ಬಿಡುತ್ತೇವೆ ಎಂದು, ಅದೇನು ಕೆರೆ ಹಾವು ಬಿಡ್ತಾರೋ ಅಥವಾ ನಾಗರ ಹಾವೇ ಬಿಡುತ್ತಾರೋ ನಾವೂ ನೋಡ್ತೇವೆ ಎಂದು ಜಾರ್ಜ್ ವ್ಯಂಗ್ಯವಾಡಿದರು. 
 
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಈ ಹಿಂದೆ ಸುದ್ದಿಗೋಷ್ಠಿ ನಡೆಸಿ ಅಕ್ರಮ ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಎಲ್ಲಾ ದಾಖಲೆಗಳಿವೆ. ಅಧಿಕಾರಿಗಳು ಕೊಡಲು ಹಿಂದೇಟು ಹಾಕುತ್ತಿದ್ದರು. ಆದರೂ ಧಮ್ಕಿ ಹಾಕಿ ದಾಖಲೆಗಳನ್ನು ಪಡೆಯಬೇಕಾಯಿತು ಎಂದು ಅವರ ಬಳಿ ಇದ್ದ ಕೆಲವು ದಾಖಲೆಗಳನ್ನು ಮಾಧ್ಯಮಗಳ ಎದುರು ಪ್ರದರ್ಶಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments