ಪೊಲೀಸರನ್ನೇ ಡ್ರಾಪ್ ಕೇಳಿ ಸಿಕ್ಕಿಬಿದ್ದ ಕಳ್ಳರು

Webdunia
ಭಾನುವಾರ, 27 ಫೆಬ್ರವರಿ 2022 (18:41 IST)
ದೊಡ್ಡಬಳ್ಳಾಪುರ: ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅಡ್ಡಹಾಕಿದ ಕಳ್ಳರು ಡ್ರಾಪ್ ಕೇಳಿದ್ರು.
ಕಾರು ನಿಲ್ಲುತ್ತಿದ್ದಂತೆ ಅದರೊಳಗೆ ಹತ್ತಿ ಅಬ್ಬಾ ಬಚಾವಾದೆವು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಆ ಕಾರು ನೇರವಾಗಿ ಪೊಲೀಸ್​ ಠಾಣೆ ಮುಂದೆ ನಿಲ್ಲುತ್ತೆ. ಅರೇ ಇದ್ಹೇನಿದು..? ಎಂದು ಕಳ್ಳರು ಪಿಳಿಪಿಳಿ ಕಣ್ಣುಬಿಟ್ಟು ನೋಡುವಷ್ಟರಲ್ಲಿ ಗೊತ್ತಾಗುತ್ತೇ ತಾವು ಡ್ರಾಪ್​ ಕೇಳಿದ್ದು ಪೊಲೀಸರನ್ನೇ..!
ಇದು ಯಾವ ಸಿನಿಮಾ ಕಥೆಯೂ ಅಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮೇಳೆಕೋಟೆಯೊಂದರ ಎಟಿಎಂ ಕೇಂದ್ರದಲ್ಲಿ ಶನಿವಾರ ದರೋಡೆ ಪ್ರಯತ್ನ ನಡೆಸಿದ ಕಳ್ಳರಿಬ್ಬರ ರಿಯಲ್ ಕಥೆ.
ಪ್ರಕರಣ ಸಂಬಂಧ ನೆಲಮಂಗಲ ತಾಲೂಕು ಅರಿಶಿನಕುಂಟೆ ನಿವಾಸಿಗಳಾದ ಸಚಿನ್ ಹಾಗೂ ಗಗನ್ ಎಂಬುವರನ್ನು ಬಂಧಿಸಿರುವ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೇಳೆಕೋಟೆ ಎಂಟಿಬಿ ಕೇಂದ್ರ ದರೋಡೆಗೆ ಯತ್ನಿಸಿದ ಕಳ್ಳರಿಬ್ಬರು ಜನರಿಂದ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದರು. ಇದೇ ವೇಳೆ ಮಾಹಿತಿ ಪಡೆದ ಪೊಲೀಸರು ಖಾಸಗಿ ಕಾರಿನಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಈ ಬಗ್ಗೆ ಅರಿವೇ ಇಲ್ಲದ ಕಳ್ಳರು ಜನರಿಂದ ತಪ್ಪಿಸಿಕೊಳ್ಳಲು ಪೊಲೀಸರಿದ್ದ ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ್ದರು. ಕಳ್ಳರನ್ನು ಹಿಡಿಯಲು ಬಂದ ಪೊಲೀಸರಿಗೆ ತುಪ್ಪ ಜಾರಿ ರೊಟ್ಟಿಗೆ ಬಿದ್ದಂತಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments