ಕೃಷ್ಟ ಮಠದೊಳಗೆ ಕಳ್ಳರ ಕೈಚಳ, ಬ್ಯಾಗಿನಿಂದ ಚಿನ್ನಾಭರಣ ಮಾಯ

Webdunia
ಭಾನುವಾರ, 15 ಮೇ 2022 (07:45 IST)
ಉಡುಪಿ:  ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ದೇವರ ತೊಟ್ಟಿಲು ಪೂಜೆ ನೋಡುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿರು ಪ್ರಕರಣ ನಡೆದಿದೆ. ಬೆಂಗಳೂರಿನ ಅತ್ತಿಬೆಲೆ ಮೂಲದ ಷಣ್ಮುಗಂ ಅವರ ಕುಟುಂಬ, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ನಂತರ ಕೃಷ್ಣಮಠದ ವಸಂತ ಮಂಟಪದ ಬಳಿ ತೊಟ್ಟಿಲು ಸೇವೆ ವೀಕ್ಷಿಸುತ್ತಿದ್ದರು. ಈ ವೇಳೆ ದೇವರ ಆರತಿ ಪಡೆಯುವಾಗ ಕಳ್ಳರು ಷಣ್ಮುಗಂ ರವರ ಹೆಂಡತಿಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ  ಚಿನ್ನಾಭರಣದ ಬಾಕ್ಸ್‌ ನ್ನು ಕಳವು ಮಾಡಿದ್ದಾರೆ. 
 
ಬಾಕ್ಸ್‌ ನಲ್ಲಿ 58 ಗ್ರಾಂ ತೂಕದ ಬಳೆಗಳು, 2.16 ಗ್ರಾಂ ತೂಕದ ಕಿವಿಯೊಲೆ, 2.13 ಗ್ರಾಂ ತೂಕದ ಮಗುವಿನ ಚಿಕ್ಕ ಬಳೆ, 1.20 ಗ್ರಾಂ ತೂಕದ ಪೆಂಡೆಂಟ್‌ ಇರುವ ಚಿನ್ನದ ಸರ, 1.48 ಗ್ರಾಂ ತೂಕದ ದೊಡ್ಡ ಚಿನ್ನದ ಸರ1  ಹೀಗೆ  ಒಟ್ಟು 155 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದೆ.   ಕಳುವಾದ ಚಿನ್ನಾಭರಣಗಳ ಒಟ್ಟು ಅಂದಾಜು ಮೊತ್ತ  6,30,000 ಮೌಲ್ಯ ರೂಪಾಯಿ ಎಂದು ತಿಳಿದುಬಂದಿದೆ .ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ  ಪ್ರಕರಣ ದಾಖಲಾಗಿದೆ.
 
ಪ್ರವಾಸಿಗರು ಹೆಚ್ಚಾಗಿ ಬರುವ  ಸಮಯ ಮತ್ತು ಸ್ಥಳವನ್ನೇ ಚೋರರು ಆಯ್ಕೆ ಮಾಡಿಕೊಳ್ಳುತ್ತಾರೆ. ಸಮುದ್ರತೀರ ಗಳಿರಬಹುದು ದೇವಸ್ಥಾನ ಗಳಿರಬಹುದು ಹೆಚ್ಚಾಗಿ ಜನ ಸೇರುವ ಪ್ರದೇಶದಲ್ಲಿ ತಮ್ಮ ಕರಾಮತ್ತು ತೋರಿಸುತ್ತಾರೆ. ಹಾಗಾಗಿ ಪ್ರವಾಸದ ಸಂದರ್ಭದಲ್ಲಿ ಆದಷ್ಟು ಕಡಿಮೆ ಆಭರಣ ಹಾಗೂ ನಗದನ್ನು ಇಟ್ಟುಕೊಳ್ಳಿ ಎಂದು ಪೊಲೀಸರು ಎಚ್ಚರಿಸಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments