Webdunia - Bharat's app for daily news and videos

Install App

ನ್ಯೂ ಇಯರ್ ಗೆ ವಿಶ್ ಮಾಡದ ವ್ಯಕ್ತಿಗೆ ಚಾಕುವಿನಿಂದ ಇರಿದ ಕಿಡಿಗೇಡಿಗಳು

Webdunia
ಬುಧವಾರ, 2 ಜನವರಿ 2019 (07:05 IST)
ಬೆಂಗಳೂರು : ಹೊಸ ವರ್ಷಕ್ಕೆ ಶುಭಾಶಯ ಹೇಳದೇ ಇದ್ದದಕ್ಕೆ ಕಿಡಿಗೇಡಿಗಳು ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ತಡರಾತ್ರಿ 12 ಗಂಟೆಗೆ ಬೆಂಗಳೂರಿನ ಕುರುಬರಹಳ್ಳಿಯ ಕಮಲಾನಗರದ ಶೆಟ್ಟಿ ಗಣಪತಿ ವಾರ್ಡ್ ನಲ್ಲಿ ನಡೆದಿದೆ.


ಪ್ರವೀಣ್ ಕಿಡಿಗೇಡಿಗಳಿಂದ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದು, ಈತ ರಾತ್ರಿ ನಡೆದುಕೊಂಡು ಬರುತ್ತಿರುವ ವೇಳೆ ಕಿಡಿಗೇಡಿಗಳು ಕುಡಿದು ಬೈಕಿನಲ್ಲಿ ಬಂದು ಈತನನ್ನು ಅಡ್ಡಗಟ್ಟಿ ನ್ಯೂ ಇಯರ್ ವಿಶ್ ಮಾಡಿದ್ದಾರೆ. ಬಳಿಕ ನಮಗೆ ವಿಶ್ ಮಾಡು ಎಂದು ಅವಾಜ್ ಹಾಕಿದ್ದಾರೆ.


ಆಗ ಅವರ ಕೈಲಿದ್ದ ಚಾಕುವನ್ನು ಕಂಡು ಗಾಬರಿಗೊಂಡು ಪರಾರಿಯಾಗಲು ಯತ್ನಿಸಿದ ಪ್ರವೀಣ್ ಗೆ ಕಿಡಿಗೇಡಿಗಳು ವಿಶ್ ಮಾಡುವುದಿಲ್ಲವಾ ನೀನು ಎಂದು ಅಡ್ಡಹಾಕಿ ಕೈ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 
ಗಾಯಗೊಂಡ ಪ್ರವೀಣ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments