Webdunia - Bharat's app for daily news and videos

Install App

ರಾಷ್ಟ್ರಕವಿ ಕುವೆಂಪು ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳನ್ನು ಕದ್ದ ಕಳ್ಳರು

Webdunia
ಮಂಗಳವಾರ, 24 ನವೆಂಬರ್ 2015 (11:33 IST)
ಶಿವಮೊಗ್ಗದ ತೀರ್ಥಹಳ್ಳಿಯ ಕುಪ್ಪಳ್ಳಿಯಲ್ಲಿರುವ  ರಾಷ್ಟ್ರ ಕವಿ ಕುವೆಂಪು ನಿವಾಸ ಕವಿಶೈಲದಲ್ಲಿ ದಾಂಧಲೆ ನಡೆಸಿರುವ ಕಳ್ಳರು ಕುವೆಂಪು ಅವರ ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ಕೂಡ  ಹೊತ್ತೊಯ್ದಿದ್ದಾರೆ.

 ಮನೆಯಲ್ಲಿರುವ ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸಿ ಶೋಕೇಸ್ ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ.  ಕುವೆಂಪು ಬರೆದಿರುವ ನಾನಾ ಪುಸ್ತಕಗಳು ಚೆಲ್ಲಾಪಿಲ್ಲಿಯಾಗಿ ನೆಲದ ಮೇಲೆ ಬಿದ್ದಿತ್ತು. ತೀರ್ಥಹಳ್ಳಿ  ಪೊಲೀಸರು ಮನೆಗೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಕುವೆಂಪು ಅವರ ನಿವಾಸವನ್ನು ರಾಷ್ಟ್ರೀಯ ಸ್ಮಾರಕವಾಗಿ ಮಾಡಲಾಗಿತ್ತು.  ಕುವೆಂಪು ನಿವಾಸದಲ್ಲಿ ಇತರೆ ಯಾವುದೇ ವಸ್ತುಗಳು ಇರಲಿಲ್ಲವೆಂದು ತಿಳಿದುಬಂದಿದೆ.

 ಕುವೆಂಪು ತಮ್ಮ ಬಾಲ್ಯವನ್ನು ಇದೇ ಮನೆಯಲ್ಲಿ ಕಳೆದಿದ್ದರು. ಕುವೆಂಪು ಅವರ ನೆನಪನ್ನು ಅಜರಾಮರವಾಗಿ ಉಳಿಸಲು ಅವರ ಮನೆಯನ್ನು ರಾಷ್ಟ್ರೀಯ ಸ್ಮಾರಕವಾಗಿ ನಿರ್ಮಿಸಲಾಗಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments