ಭಾರಿ ಕಳ್ಳತನಕ್ಕೆ ಕೈ ಹಾಕಿ ಫೇಲ್ ಆದ ಕಳ್ಳರು

Webdunia
ಬುಧವಾರ, 19 ಜೂನ್ 2019 (16:37 IST)
ತಡರಾತ್ರಿ ಭಾರಿ ಕಳ್ಳತನಕ್ಕೆ ಕೈ ಹಾಕಿ ಕಳ್ಳರು ವಿಫಲಗೊಂಡ ಘಟನೆ ನಡೆದಿದೆ.

ಒಂದೇ ರಾತ್ರಿ 3 ಅಂಗಡಿಗಳಲ್ಲಿ ದೋಚಲು ಮುಂದಾಗಿ ಬಾಗಿಲುಗಳನ್ನು ಮೀಟಿದ್ದಾರೆ ಡಕಾಯಿತರು. ಸಿಸಿಟಿವಿ ಇದ್ದರೂ ಲೆಕ್ಕಿಸದೆ ಕಳ್ಳತನಕ್ಕೆ ಮುಂದಾಗಿದ್ದಾರೆ ಖದೀಮರು. ನಂಜನಗೂಡು ಪಟ್ಟಣದಲ್ಲಿ ನಿಲ್ಲದ ಡಕಾಯಿತರ ಹಾವಳಿ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ನಂಜನಗೂಡು ಪಟ್ಟಣದ ಹುಲ್ಲಹಳ್ಳಿ  ಮುಖ್ಯರಸ್ತೆಯಲ್ಲಿ ನಡೆದಿರುವ ಘಟನೆ ಇದಾಗಿದೆ. ಪಟ್ಟಣದ ಹುಲ್ಲಹಳ್ಳಿ ರಸ್ತೆಯಲ್ಲಿರುವ ನಂದಿನಿ ಹಾರ್ಡ್ವೇರ್, ವರ್ಧಮಾನ ಹಾರ್ಡ್ವೇರ್ ಹಾಗೂ ಈಗಲ್ ಪ್ಯಾಲೇಸ್ ಅಂಗಡಿಯಲ್ಲಿ ಬಾಗಿಲುಗಳನ್ನು ಮಿಟಿರುವ ಡಕಾಯಿತರು ಕಳ್ಳತನ ಯತ್ನ ನಡೆಸಿದ್ದಾರೆ.

ಹಾಸಿಗೆ ಅಂಗಡಿಯಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚು ಬೆಲೆಬಾಳುವ ಬ್ಯಾಗ್ ಮತ್ತೊಂದು ನಾಲ್ಕು ಚಕ್ರ ವಾಹನದ ಬ್ಯಾಟರಿ ಹೊತ್ತೊಯ್ದಿದ್ದಾರೆ. ಇನ್ನು ಎರಡು  ದೊಡ್ಡ  ಹಾರ್ಡ್ವೇರ್ ಅಂಗಡಿಗಳಲ್ಲಿ ಬಾಗಿಲು ಮೀಟುವ ಸಂದರ್ಭ  ಶಬ್ದ ಬಂದ ಕಾರಣ ಕಳ್ಳ ರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.  

ಸುಮಾರು ಆರು ತಿಂಗಳ ಹಿಂದೆ ನಂಜನಗೂಡು ಪಟ್ಟಣದ ಹೃದಯ ಭಾಗದ ಕೆನರಾ ಬ್ಯಾಂಕ್ ನಲ್ಲಿ ಹಾಡುಹಗಲೇ ಸುಮಾರು 7 ಲಕ್ಷ ರೂಗಳ ಹಣವನ್ನು ಕದ್ದು ಪರಾರಿಯಾಗಿದ್ದರು.  ತಡರಾತ್ರಿ ನಡೆದಿರುವ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಬಾರಿ ಬೇಸಿಗೆ ಹೇಗಿರಲಿದೆ, ಹವಾಮಾನ ತಜ್ಞರ ಎಚ್ಚರಿಕೆ ಗಮನಿಸಿ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಮುಂದಿನ ಸುದ್ದಿ
Show comments