ಪಾಕಿಸ್ತಾನಕ್ಕೆ ಆಹಾರ, ಔಷಧಿ ಒದಗಿಸಲು ಚಿಂತನೆ..!

Webdunia
ಮಂಗಳವಾರ, 30 ಆಗಸ್ಟ್ 2022 (18:04 IST)
ಪಾಕಿಸ್ತಾನದ ಜನರು ಪ್ರವಾಹದಿಂದ ನಲುಗಿದ್ದಾರೆ. ನನ್ನ ಹೃದಯ ಭಾರವಾಗಿದೆ. ಅಲ್ಲಿನ ಪರಿಸ್ಥಿತಿ ಶೀಘ್ರ ಸುಧಾರಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇತಿಹಾಸದ ಅತ್ಯಂತ ಭೀಕರ ಪ್ರವಾಹ ಪರಿಸ್ಥಿತಿಗೆ ಸಿಲುಕಿರುವ ಪಾಕಿಸ್ತಾನದ ಬಗ್ಗೆ ಭಾರತ ಸರ್ಕಾರದ ಪರವಾಗಿ ಇದೇ ಮೊದಲ ಬಾರಿಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿ, ಜನರ ನೋವಿಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನಕ್ಕೆ ಅಗತ್ಯ ಮಾನವೀಯ ನೆರವು ಒದಗಿಸಲು, ಪಾಕಿಸ್ತಾನದ ಅಗತ್ಯಗಳನ್ನು ಸರಿಯಾಗಿ ಗ್ರಹಿಸಿ ಸ್ಪಂದಿಸುವ ಉದ್ದೇಶದಿಂದ ಪಾಕ್ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಯುತ್ತಿದೆ. ಪಾಕಿಸ್ತಾನದಲ್ಲಿ ಪ್ರವಾಹದಿಂದ ಈವರೆಗೆ 1,100 ಮಂದಿ ಮೃತಪಟ್ಟಿದ್ದು, ಸುಮಾರು 700 ಮನೆಗಳು ಹಾಳಾಗಿವೆ. ಗಾಯದ ಮೇಲೆ ಬರೆ ಎಳೆದಂತೆ ಪಾಕಿಸ್ತಾನವು ಈಗ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. ಪ್ರಧಾನಿ ಶೆಹ್​ಬಾಜ್ ಷರೀಫ್ ಜಾಗತಿಕ ಸಮುದಾಯದ ನೆರವು ಕೋರಿದ್ದಾರೆ. ಪಾಕಿಸ್ತಾನದ ಸುಮಾರು 3.3 ಕೋಟಿ ಮಂದಿ ಪ್ರವಾಹದಿಂದಾಗಿ ಸ್ಥಳಾಂತರವಾಗಿದ್ದಾರೆ. ಒಟ್ಟು ಜನಸಂಖ್ಯೆಯ ಏಳನೇ ಒಂದು ಭಾಗ ಪ್ರವಾಹದಿಂದ ಹಾನಿ ಅನುಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments