ಅವಧಿಗೂ ಮುನ್ನವೇ ಅಧಿವೇಶನ ಮೊಟಕುಗೊಳಿಸಲು ಚಿಂತನೆ

Webdunia
ಮಂಗಳವಾರ, 20 ಫೆಬ್ರವರಿ 2018 (20:46 IST)
ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆಯಲ್ಲಿ ರಾಜಕೀಯ ಪಕ್ಷಗಳು, ಶಾಸಕರು, ತೊಡಗಿಕೊಳ್ಳುತ್ತಿರುವುದರಿಂದ ವಿಧಾನಸಭೆಯ ಅಧಿವೇಶನವನ್ನು ನಿಗದಿತ ಅವಧಿಗೂ ಮುನ್ನ ಮೊಟಕು ಗೊಳಿಸಲು ಉದ್ದೇಶಿಸಲಾಗಿದೆ. 
 
ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅಧ್ಯಕ್ಷತೆಯಲ್ಲಿ ನಡೆದ ವಿಧಾನಸಭೆ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.
 
ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಅಧಿವೇಶನಕ್ಕೆ ಬರದಿರುವುದರಿಂದ ಅಧಿವೇಶನ ಕಳೆ ಕಟ್ಟುತ್ತಿಲ್ಲ. ಶಾಸಕರ ನಿರಾಸಕ್ತಿ ಎದ್ದು ಕಾಣುತ್ತಿದೆ ಎಂಬ ನೆಪವೊಡ್ಡಿ ತಿಂಗಳ ಅಂತ್ಯದವರೆಗೂ ನಡೆಯಬೇಕಿದ್ದ ಅಧಿವೇಶನವನ್ನು ಫೆ.23ಕ್ಕೆ ಮುಕ್ತಾಯಗೊಳಿಸಲಾಗುತ್ತಿದೆ.
 
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಹಾಗೂ ಬಜೆಟ್ ಮೇಲಿನ ಚರ್ಚೆಗೆ ಸರ್ಕಾರ ಉತ್ತರ ನೀಡಿದ ನಂತರ ಲೇಖಾನುದಾನ ಪಡೆದು ಅಧಿವೇಶನವನ್ನು ಅನಿರ್ದಿಷ್ಟಾವಧಿ ಮುಂದೂಡಲು ಚಿಂತನೆ ನಡೆದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ಮುಂದಿನ ಸುದ್ದಿ
Show comments