ಲೈಂಗಿಕ ಅಲ್ಪಸಂಖ್ಯಾತರ ನೀತಿ ಜಾರಿಗೆ ಸರ್ಕಾರ ಚಿಂತನೆ

Webdunia
ಶುಕ್ರವಾರ, 27 ಅಕ್ಟೋಬರ್ 2017 (08:26 IST)
ಬೆಂಗಳೂರು: ಮಂಗಳಮುಖಿಯರನ್ನು ಮುಖ್ಯವಾಹಿನಿಗೆ ತರಲು ರಾಜ್ಯ ಸರ್ಕಾರ ಲೈಂಗಿಕ ಅಲ್ಪ ಸಂಖ್ಯಾತರ ನೀತಿ ಜಾರಿಗೆ ತರಲು ತೀರ್ಮಾನಿಸಿದೆ. ಸರ್ಕಾರಿ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಮೊದಲ ಹೆಜ್ಜೆಯಾಗಿ ಮಂಗಳಮುಖಿಯರ ಶ್ರೇಯೋಭಿವೃದ್ಧಿಗಾಗಿ ಪ್ರತ್ಯೇಕ ನೀತಿ ತರಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಶೇಷವಾಗಿ ಲೈಂಗಿಕ ಅಲ್ಪ ಸಂಖ್ಯಾತರಿಗೆ ಸರ್ಕಾರಿ ಸವಲತ್ತುಗಳನ್ನು ಒದಗಿಸುವ ಕುರಿತು ಸುದೀರ್ಘ‌ ಚರ್ಚೆ ನಡೆಸಲಾಯಿತು. ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಕುರಿತು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಪ್ರತ್ಯೇಕ ನೀತಿ ಜಾರಿಗೊಳಿಸಿ, ಅಗತ್ಯ ಕಾನೂನು ರೂಪಿಸಿ ಮೀಸಲಾತಿ ಸೌಲಭ್ಯ ಜಾರಿಗೊಳಿಸುವ ನಿರ್ಧಾರವನ್ನು ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ಜೋಗಪ್ಪ, ಜೋಗತಿ, ಹಿಜ್ಡಾ, ಖೋತಿ, ಶಿವಶಕ್ತಿಗಳು ಮತ್ತು ಅರ್ವನಿಸ್‌, ಸಲಿಂಗ ರತಿಗಳು, ಪುರುಷತ್ವದಿಂದ ಮಹಿಳೆ, ಮಹಿಳೆಯಿಂದ ಪುರುಷರಾಗಿ ಲಿಂಗ ಪರಿವರ್ತಿಸಿಕೊಂಡವರು ಈ ನೀತಿ ವ್ಯಾಪ್ತಿಗೆ ಒಳಪಡಲಿದ್ದಾರೆ. ಇವರನ್ನು ತೃತಿಯ ಲಿಂಗಿಗಳು ಅಥವಾ ಲಿಂಗಪರಿವರ್ತಿತರು ಎಂದು ಕರೆಯಲು ತೀರ್ಮಾನಿಸಲಾಗಿದೆ.

ಹೊಸ ನೀತಿಯನ್ವಯ ಮಂಗಳ ಮುಖಿಯರನ್ನು ಸಾಮಾಜಿಕವಾಗಿ ಕೀಳು ಮಟ್ಟದಿಂದ ನೋಡುವಂತಿಲ್ಲ. ಬಸ್‌, ಪಾರ್ಕ್ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ತಾರತಮ್ಯ ಮಾಡುವಂತಿಲ್ಲ. ಮಂಗಳಮುಖಿಯರ ಲಿಂಗತ್ವ ಕಾರಣಕ್ಕೆ ಸಂವಿಧಾನಿಕವಾಗಿ ದೊರೆಯುವ ವಾಕ್‌ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸುವಂತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ