Webdunia - Bharat's app for daily news and videos

Install App

ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಈ ಆಸ್ಪತ್ರೆ ಸಜ್ಜು

Webdunia
ಶನಿವಾರ, 9 ಮೇ 2020 (14:28 IST)
ಕೋವಿಡ್ -19 ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಆಸ್ಪತ್ರೆ ಸಿದ್ಧಗೊಂಡಿದೆ.

ಕಾರವಾರದ ಕ್ರಿಮ್ಸ್ (ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ನಲ್ಲೂ ಕೋವಿಡ್-19 ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಎಲ್ಲ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗಂತ ಉತ್ತರಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ರೋಶನ್ ಹೇಳಿದ್ದಾರೆ.  

ಕೋವಿಡ್ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಮೂಲಕ ಚಿಕಿತ್ಸೆ ನೀಡಬಹುದೆಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಿಂದಲೂ ಸುತ್ತೋಲೆ ಬಂದಿದೆ. ಈ ನಿಟ್ಟಿನಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹಿರಿಯ ತಜ್ಞರ ವೈದ್ಯರುಗಳಿಂದ ಸಿದ್ಧಪಡಿಸಲಾದ ವಿಸ್ತೃತವಾದ ವರದಿಯೊಂದನ್ನು ಸರ್ಕಾರಕ್ಕೆ ಹಾಗೂ ಐಸಿಎಮ್‌ಆರ್‌ಗೆ ಕಳುಹಿಸಲಾಗಿದೆ. ಅಲ್ಲಿಂದ ಅನಮೋದನೆ ಬಂದ ನಂತರ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಆರಂಭಿಸಲಾಗುವುದು ಎಂದರು.

 ಭಟ್ಕಳದ ಎಲ್ಲಾ 13 ಕೋವಿಡ್ ಸೋಂಕಿತರನ್ನು ಕಾರವಾರದ ಕ್ರಿಮ್ಸ್ಗೆ ಶಿಫ್ಟ್ ಮಾಡಲಾಗಿದೆ. ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಈಗಾಗಲೇ ವೆಂಟಿಲೆಟರ್ ಹೊಂದಿರುವಂಥ ತುರ್ತು ಚಿಕಿತ್ಸೆಯ 200 ಬೆಡ್‌ಗಳ ಕೋವಿಡ್ ಸ್ಪೇಷಲ್ ವಾರ್ಡ್ಗಳು  ಸಜ್ಜುಗೊಳಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments