Select Your Language

Notifications

webdunia
webdunia
webdunia
webdunia

ಗೌರವ ಡಾಕ್ಟರೇಟ್‌ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾರಣ ಬಿಚ್ಚಿಟ್ಟಿದ್ದು ಹೀಗೇ

Karnataka Confgress Government

Sampriya

ಬೆಂಗಳೂರು , ಮಂಗಳವಾರ, 3 ಜೂನ್ 2025 (19:48 IST)
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಗೌರವ ಪದವಿಯನ್ನು ಸ್ವೀಕರಿಸಲು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ನಿರಾಕರಿಸುವ ಮೂಲಕ ಸುದ್ದಿಯಾಗಿದ್ದಾರೆ.
ಗೌರವ ಡಾಕ್ಟರೇಟ್‌ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾರಣ ಬಿಚ್ಚಿಟ್ಟಿದ್ದು ಹೀಗೇ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಗೌರವ ಪದವಿಯನ್ನು ಸ್ವೀಕರಿಸಲು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ನಿರಾಕರಿಸಿದ್ದಾರೆ.

ಈ ಸಂಬಂಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದಿರುವ ಅವರು, ವಿವಿ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್‌ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ನನ್ನ ಈ ನಿರ್ಧಾರವನ್ನು ಅನ್ಯತ ಭಾವಿಸದೆ ನಾನು ಮನಸೋಇಚ್ಛೆ ಕೈಗೊಂಡ ನಿರ್ಧಾರವಾಗಿದ್ದು, ಈ ತೀರ್ಮನವನ್ನು ಸ್ವಾಗತಿಸುತ್ತೀರೆಂದು ಭಾವಿಸುವುದಾಗಿ ಹೇಳಿದ್ದಾರೆ.

ಗೌರವ ಡಾಕ್ಟರೇಟ್‌ ಪದವಿಯನ್ನು ನನಗೆ ಪ್ರದಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇನೆ.

ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶ ಅವಶ್ಯಕತೆ ಇರುತ್ತದೆ ಎಂದಿದ್ದಾರೆ. ರಾಜ್ಯ ಮುಕ್ತ ವಿವಿ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ಮಾ.27ರಂದು ವಿವಿಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಗೌರವ ಪದವಿಯನ್ನು ನೀಡುವುದರ ಮೂಲಕ ಸನಾನಿಸಿದ ವ್ಯವಸ್ಥಾಪನ ಮಂಡಳಿಗೆ ನಾನು ಹುತ್ಪೂರ್ತಕ ಅಬಾರಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.


ಈ ಸಂಬಂಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದಿರುವ ಅವರು, ವಿವಿ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್‌ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ನನ್ನ ಈ ನಿರ್ಧಾರವನ್ನು ಅನ್ಯತ ಭಾವಿಸದೆ ನಾನು ಮನಸೋಇಚ್ಛೆ ಕೈಗೊಂಡ ನಿರ್ಧಾರವಾಗಿದ್ದು, ಈ ತೀರ್ಮನವನ್ನು ಸ್ವಾಗತಿಸುತ್ತೀರೆಂದು ಭಾವಿಸುವುದಾಗಿ ಹೇಳಿದ್ದಾರೆ.

ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇನೆ.

ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶ ಅವಶ್ಯಕತೆ ಇರುತ್ತದೆ ಎಂದಿದ್ದಾರೆ. ರಾಜ್ಯ ಮುಕ್ತ ವಿವಿ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ಮಾ.27ರಂದು ವಿವಿಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಗೌರವ ಪದವಿಯನ್ನು ನೀಡುವುದರ ಮೂಲಕ ಸನಾನಿಸಿದ ವ್ಯವಸ್ಥಾಪನ ಮಂಡಳಿಗೆ ನಾನು ಹುತ್ಪೂರ್ತಕ ಅಬಾರಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ