Webdunia - Bharat's app for daily news and videos

Install App

ಬಿಪಿಎಲ್ ಕಾರ್ಡ್ ರದ್ದತಿಯಲ್ಲಿ ಬಡವರಿಗೆ ಅನ್ಯಾಯವಾಗಲು ಸರ್ಕಾರದ ಈ ಒಂದು ತಪ್ಪು ಕಾರಣ

Krishnaveni K
ಶುಕ್ರವಾರ, 22 ನವೆಂಬರ್ 2024 (10:38 IST)
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಪ್ಯಾನ್ ಕಾರ್ಡನ್ನು ಆಧಾರವಾಗಿ ಇಟ್ಟುಕೊಂಡು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುತ್ತಿದ್ದಾರೆ. ಬಿಪಿಎಲ್ 11.5 ಲಕ್ಷ ಕಾರ್ಡುಗಳನ್ನು ಏಕಾಏಕಿ ರದ್ದು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ 10-15 ಲಕ್ಷ ಕಾರ್ಡ್‍ಗಳನ್ನು ರದ್ದು ಮಾಡಲಿದ್ದಾರೆ. ಪ್ಯಾನ್ ಕಾರ್ಡ್ ಎಂದರೆ ಬೀದಿ ಬದಿಯ ವ್ಯಾಪಾರಿಗಳು ಕೂಡ ಅದನ್ನು ಹೊಂದಿದ್ದಾರೆ. ಅದಿಲ್ಲದೆ ವ್ಯವಹಾರ ಆಗುವುದಿಲ್ಲ ಎಂದು ತಿಳಿಸಿದರು.

ಬಿಪಿಎಲ್ ಕಾರ್ಡ್ ರದ್ದು ಮಾಡುವಾಗ ಅಧಿಕಾರಿಗಳು ವೈಜ್ಞಾನಿಕವಾಗಿ ಕಾರ್ಯ ನಿರ್ವಹಿಸಿಲ್ಲ. ಮುಂದಿನ 15-20 ದಿನಗಳಲ್ಲಿ ಏಕಾಏಕಿಯಾಗಿ 20 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ, ಮುಖ್ಯಮಂತ್ರಿಗಳಿಗೆ ಸಾವಿರಾರು ಕೋಟಿ ಗೃಹಲಕ್ಷ್ಮಿ ಯೋಜನೆಯ ಹಣ ಉಳಿಯಲಿದೆ. ಮತ್ತೊಂದು ಕಡೆ ಬಿಪಿಎಲ್ ಕಾರ್ಡ್‍ಗೆ ಕೊಡುವ 5 ಕೆಜಿ ಅಕ್ಕಿಗೆ ಸಂಬಂಧಿಸಿ ಹಣ ಹಾಕುವುದೂ ಉಳಿಯಲಿದೆ ಎಂದು ಆರೋಪಿಸಿದರು.

ಗ್ಯಾರಂಟಿ, ಗ್ಯಾರಂಟಿ ಎಂದು ಚುನಾವಣೆ ವೇಳೆ ಭರವಸೆ ನೀಡಿದ್ದರು. ಆದರೆ, ಜನರು ಇವತ್ತು ಛೀ ಥೂ ಎಂದು ಉಗಿಯುವಂತಾಗಿದೆ. ಬಿಪಿಎಲ್ ಕಾರ್ಡ್ ಕೊಡಿ ಎಂದು ತಾಯಂದಿರು ಕಣ್ಣೀರು ಹಾಕುತ್ತಿದ್ದಾರೆ ಎಂದ ಅವರು, ಒಂದೆಡೆ ವಕ್ಫ್ ವಿಚಾರದಲ್ಲಿ ರೈತರಿಗೆ ಬರೆ ಎಳೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ಮಾಹಿತಿಯೇ ಇಲ್ಲ ಎನ್ನುತ್ತಾರೆ. ಇನ್ನೊಂದೆಡೆ ಸಚಿವರ, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಇದು ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಷರಾ ಬರೆಯುತ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments