ಕೋರ್ಟ್ ಗೆ ಬಂದ ದರ್ಶನ್ ಗ್ಯಾಂಗ್ ಗೆ ನ್ಯಾಯಾಧೀಶರು ಕೇಳಿದ ಪ್ರಶ್ನೆ ಏನು

Krishnaveni K
ಗುರುವಾರ, 20 ಜೂನ್ 2024 (16:46 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿದ್ದು, ಇದೀಗ ಕೋರ್ಟ್ ಗೆ ಹಾಜರಪಡಿಸಲಾಗಿದೆ.

ದರ್ಶನ್ ಆಂಡ್ ಗ್ಯಾಂಗ್ ಕೋರ್ಟ್ ಗೆ ಬಂದ ಹಿನ್ನಲೆಯಲ್ಲಿ ಕೋರ್ಟ್ ಸುತ್ತಮುತ್ತ ಸಾಕಷ್ಟು ಜನ ಸೇರಿದ್ದು ಬಿಗಿ ಭದ್ರತೆ ಒದಗಿಸಲಾಗಿದೆ. ಇದೀಗ ಕೋರ್ಟ್ ನಲ್ಲಿ ವಾದ-ಪ್ರತಿ ವಾದ ನಡೆಯುತ್ತಿದ್ದು ಪೊಲೀಸರು ದರ್ಶನ್ ಸೇರಿದಂತೆ ಪ್ರಮುಖ ನಾಲ್ವರು ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಕೇಳಿದ್ದಾರೆ.

ಎಸ್ ಪಿಪಿ ಪ್ರಸನ್ನ ಕುಮಾರ್ ಮತ್ತೆ ಹೆಚ್ಚಿನ ವಿಚಾರಣೆಗೆ ದರ್ಶನ್, ವಿನಯ್, ಪ್ರದೂಷ್, ಲಕ್ಷ್ಮಣ್ ಮತ್ತು ನಾಗರಾಜ್ ರನ್ನು ಪೊಲೀಸ್ ಕಸ್ಟಡಿಗೆ ನೀಡಲು ಮನವಿ ಮಾಡಿದ್ದಾರೆ. ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಪವಿತ್ರಾ ಗೌಡ ಸೇರಿ 10 ಮಂದಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ.

ಇನ್ನು, ಕೋರ್ಟ್ ಗೆ ಹಾಜರಾದ ದರ್ಶನ್ ಮತ್ತು ಎಲ್ಲಾ ಆರೋಪಿಗಳಿಗೆ ನ್ಯಾಯಾಧೀಶರು ಎಂದಿನಂತೆ ಪ್ರಶ್ನೆ ಮಾಡಿದ್ದಾರೆ. 9 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪೊಲೀಸರು ನಿಮಗೆ ತೊಂದರೆ ಕೊಟ್ಟಿದ್ದಾರೆಯೇ ಎಂದು ಪ್ರತಿಯೊಬ್ಬ ಆರೋಪಿಯನ್ನೂ ಪ್ರತ್ಯೇಕವಾಗಿ ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಎಲ್ಲಾ ಆರೋಪಿಗಳು ಇಲ್ಲ ಎಂದು ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments