Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಗೆ ಬ್ರೇಕ್ ಹಾಕಿದ ವ್ಯಕ್ತಿ ಇವರೇ

Krishnaveni K
ಬುಧವಾರ, 8 ಜನವರಿ 2025 (10:56 IST)
ಬೆಂಗಳೂರು: ರಾಜ್ಯದಲ್ಲಿ ಡಿನ್ನರ್ ಪೊಲಿಟಿಕ್ಸ್ ಜೋರಾಗಿರುವ ಬೆನ್ನಲ್ಲೇ ಹೈಕಮಾಂಡ್ ಬ್ರೇಕ್ ಹಾಕಿದೆ. ಆದರೆ ಹೈಕಮಾಂಡ್ ಬ್ರೇಕ್ ಹಾಕಲು ಕಾರಣವಾದ ವ್ಯಕ್ತಿ ಇವರೇ.

ಡಿಕೆ ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದಾಗ ತಮ್ಮ ಆಪ್ತ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿದ್ದರು. ಇದಾದ ಬಳಿಕ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಅನಗತ್ಯ ಗೊಂದಲ ಶುರುವಾಗಿತ್ತು.

ನಿನ್ನೆ ಸಚಿವ ಈಶ್ವರ ಖಂಡ್ರೆ ನಾನೂ ಡಿನ್ನರ್ ಗೆ ಕರೀತೀನಿ. ಅದರಲ್ಲಿ ತಪ್ಪೇನಿದೆ ಎಂದಿದ್ದರು. ಇನ್ನು ಗೃಹಸಚಿವ ಜಿ ಪರಮೇಶ್ವರ್ ಕೂಡಾ ದಲಿತ ಶಾಸಕರು, ಸಚಿವರನ್ನು ಒಟ್ಟುಗೂಡಿಸಿ ಇಂದು ಡಿನ್ನರ್ ಮೀಟ್ ಕರೆದಿದ್ದರು. ಇದರ ಬೆನ್ನಲ್ಲೇ ಹೈಕಮಾಂಡ್ ತಕ್ಷಣವೇ ಡಿನ್ನರ್ ಮೀಟ್ ನಿಲ್ಲಿಸುವಂತೆ ಆದೇಶ ನೀಡಿದೆ. ಹೀಗಾಗಿ ಪರಮೇಶ್ವರ್ ಕೂಡಾ ತಾವು ನಡೆಸಲು ಉದ್ದೇಶಿದ್ದ ಡಿನ್ನರ್ ಮೀಟ್ ನ್ನು ಹಿಂಪಡೆದಿದ್ದಾರೆ.

ಇದೆಲ್ಲದರ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಇದ್ದಾರೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಡಿನ್ನರ್ ಮೀಟ್ ಪೊಲಿಟಿಕ್ಸ್ ಮತ್ತು ಅದರಿಂದ ಆಗುತ್ತಿರುವ ಗೊಂದಲಗಳ ಬಗ್ಗೆ ಡಿಕೆಶಿ ಹೈಕಮಾಂಡ್ ಗೆ ವರದಿ ನೀಡಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಹೈಕಮಾಂಡ್ ಮಧ್ಯಪ್ರವೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments