Webdunia - Bharat's app for daily news and videos

Install App

ಈ ಸಾರಿ ಕಪ್ ನಮ್ದೆ ಪಂಚಿಂಗ್ ಡೈಲಾಗ್ ಹೊಡೆದ ಕುಮಾರಸ್ವಾಮಿ

Webdunia
ಗುರುವಾರ, 3 ಮೇ 2018 (16:55 IST)
ಈ ಸಾರಿ ಕಫ್ ನಮ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಂಚಿಂಗ್ ಡೈಲಾಗ್ ಹೊಡೆದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
50-50 ಎನ್ನುವ ಮಾತೆ ಇಲ್ಲ. ಈ ಸಲ ಕಫ್ ಜೆಡಿಎಸ್ ಪಾಲಾಗೋದು ಗ್ಯಾರಂಟಿ.ಹೆಚ್ಡಿಕೆ ಅವಕಾಶವಾದಿ ಎನ್ನುವ ಸಿಎಂ ಹೇಳಿಕೆಗೆ ಹೆಚ್‌ಡಿಕೆ ಕೆಂಡಾಮಂಡಲವಾಗಿ. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದರು.
 
ಕುರುಬರ ಓಟುಗಳನ್ನ ಪಡೆಯೋಕೆ ಬಾದಾಮಿಗೆ ಅರ್ಜಿ ಹಾಕಿದ್ದಾರೆ. ಸಿಎಂ ಸಂಕೋಚಿತ ಮನೋಭಾವದ ವ್ಯಕ್ತಿ. ಅವರಿಂದ ನಾನು ಪಾಠ ಕಲೆಯಬೇಕಿಲ್ಲ.
 
ಜೆಡಿಎಸ್‌ನ ಮುಸ್ಲಿಂ ಮತದಾರರನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷವನ್ನ ತಳಕು ಹಾಕುವ ಮೂಲಕ ಮುಸ್ಲಿಂ ಮತಗಳನ್ನ ಒಡೆಯುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಓರ್ವ ಶುದ್ಧ ಸುಳ್ಳು ಬುರುಕ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಸಿಎಂ ಕೀಳುಮಟ್ಟದ ರಾಜಕೀಯ ಮಾಡ್ತಿದ್ದಾರೆ. ನಾನು ಯಾವತ್ತು ಕೀಳುಮಟ್ಟದ ರಾಜಕೀಯ ಮಾಡಿಲ್ಲ.ಕಾವೇರಿ ತೀರ್ಪು ವಿಚಾರ. ತೀರ್ಪಿನ ಬಗ್ಗೆ ನಾನು ಚರ್ಚೆ ಮಾಡಲು ಹೋಗೋದಿಲ್ಲ. ಕಾವೇರಿ ವಿವಾಧ ಇನ್ನು ಬಗೆ ಹರಿದಿಲ್ಲ. ಬಗೆ ಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಈ ವಿಚಾರದಲ್ಲಿ ಸರ್ಕಾರ ತಾವೇ ಎನೊ ಸಾಧನೆ ಮಾಡಿದಂತೆ ಹೇಳಿಕೊಳ್ತಿತ್ತು. ಕಾವೇರಿ ಹೋರಾಟ ಮುಂದುವರೆಸುತ್ತೇವೆ. ಸೂಕ್ತ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಂಡು ಹೋರಾಟ ಮಾಡುತ್ತೇವೆ. ಹೋರಾಟ ಕೈ ಬಿಡುವ ಪ್ರಶ್ನೆ ಇಲ್ಲ ಎಂದರು.
 
ರಾಹುಲ್ ಗಾಂಧಿಗೆ ಟಾಂಗ್ ನೀಡಿದ ಕುಮಾರಸ್ವಾಮಿ. ಜೆಡಿಎಸ್ ಪಕ್ಷ ಕಾಂಗ್ರೆಸ್ ಕಡೆಗು ಇಲ್ಲಾ, ಬಿಜೆಪಿ ಕಡೆಗು ಇಲ್ಲಾ. ಜೆಡಿಎಸ್ ಕನ್ನಡಿಗರ ಕಡೆಗಿದೆ.ನಾನು ಕಾಂಗ್ರೆಸ್ ಹಾಗೂ ಬಿಜೆಪಿ ಗುಲಾಮನಲ್ಲ ಎಂದು ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments