ಸಂಕಷ್ಟ ಸಮಯದಲ್ಲಿ ಸಿಎಂ ಬದಲಾವಣೆ ದುರ್ದೈವ: ಸಿದ್ದರಾಮಯ್ಯ

Webdunia
ಸೋಮವಾರ, 26 ಜುಲೈ 2021 (21:54 IST)

ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಹೆದರಿಸಿ ರಾಜೀನಾಮೆ ಕೊಡಿಸಲಾಗಿದೆ. ಇನ್ನೂ 15 ದಿವಸ ಬಿಟ್ಟು ಸಿಎಂ ಅವರನ್ನ ತಗೆಬಹುದಿತ್ತು. ಅಷ್ಟು ಅವಸರದಲ್ಲಿ ತೆಗೆಯುವ ಅವಶ್ಯಕತೆ ಏನಿತ್ತು ಅನ್ನೋದು ಗೊತ್ತಾಗುತ್ತಿಲ್ಲ ಎಂದರು.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತಗೆಯುವುದು ಖಚಿತ ಅಂದರೆ ಇನ್ನೊಂದು ವಾರ, 15 ದಿನ ಬಿಟ್ಟು ತೆಗೆಯಬಹುದಿತ್ತು. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಕಡಿಮೆ ಆದ ಮೇಲೆ ತೆಗೆಯಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟರು.

ಬಾದಾಮಿಯಲ್ಲಿ ಬೆಳೆ ಹಾನಿ ನೋಡಿಕೊಂಡು ಬಂದೆ. ನಾಳೆ ಖಾನಾಪುರ, ಬೆಳಗಾವಿ ಗ್ರಾಮೀಣ, ಯಮಕನಮರಡಿ ಕ್ಷೇತ್ರದಲ್ಲಿ ಪ್ರವಾಸ ಮಾಡಲಿದ್ದೇನೆ. ಬಾದಾಮಿಯಲ್ಲಿ ಮನೆಗೆ ನೀರು ನುಗ್ಗಿಲ್ಲ. ಆದರೆ ಜಮೀನಿಗೆ ನೀರು ನುಗ್ಗಿ ಬಹಳಷ್ಟು ಹಾನಿ ಆಗಿದೆ. ಕಳೆದ ವರ್ಷವೇ ಪರಿಹಾರ ಸರಿಯಾಗಿ ಕೊಟ್ಟಿಲ್ಲ. 2019ರಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಕೊಟ್ಟಿಲ್ಲ. ಈಗಲಾದರೂ ಸರ್ಕಾರ 2019, ಈಗಿನ ಪರಿಹಾರ ಕೊಡಬೇಕು ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರ ಮೀನಾಮೇಷ ಮಾಡದೇ ಪರಿಹಾರ ಕೊಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಠಿಕಾಣಿ ಹೂಡಬೇಕು. ಪ್ರತಿನಿತ್ಯ ಜಿಲ್ಲೆಯಲ್ಲಿ ಏನು ಆಗ್ತಿದೆ ಅನ್ನೋದನ್ನ ನೋಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಹ ಬಂದಿಲ್ಲ ಅಂತಾ ಹೇಳೋದು ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಯಡಿಯೂರಪ್ಪ ಏನು ಶೋಕಿ ಮಾಡಲಿಕ್ಕೆ ಬಂದಿದ್ರಾ? ಕತ್ತಿ, ಸವದಿ, ಕಾರಜೋಳ, ಆರ್.ಅಶೋಕ್ ಅವರನ್ನೆಲ್ಲ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಅಂದ ಮೇಲೆ ಏಕೆ ಬಂದ್ರಿ ಅಂತಾ ಕೇಳಬೇಕಿತ್ತು. ಪಾಪ ಸಿಎಂ ಬಿಎಸ್‌ವೈ ಇವತ್ತು ಹೋಗ್ತಿದ್ದರಲ್ಲ ಅದಕ್ಕೆ ನಿನ್ನೆ ಕಾಟಾಚಾರಕ್ಕೆ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments