Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

DCM DK Shivkumar
ಬೆಂಗಳೂರು: ಅಭಿವೃದ್ಧಿಯ ಮಂತ್ರ, ಸಮೃದ್ಧಿಯ ಗುರಿ. ಪ್ರತಿಯೊಂದು ವಲಯಕ್ಕೂ ಸಮಾನ ಆದ್ಯತೆ ನೀಡಲಾಗಿದೆಯೆಂದು ಸಿದ್ದರಾಮಯ್ಯರ 17ನೇ ಬಜೆಟ್‌ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಅವರು  ಬಜೆಟ್‌ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಜೆಟ್ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಅಭಿವೃದ್ಧಿಯ ಮಂತ್ರ, ಸಮೃದ್ಧಿಯ ಗುರಿ. ಪ್ರತಿಯೊಂದು ವಲಯಕ್ಕೂ ಸಮಾನ ಆದ್ಯತೆ ನೀಡಿ, ಸಮೃದ್ಧ ಕರ್ನಾಟಕದ ನಿರ್ಮಾಣಕ್ಕಾಗಿ ₹4.48 ಲಕ್ಷ ಕೋಟಿ ಮೊತ್ತದ 2026-2027 ಸಾಲಿನ ಬೃಹತ್ ಬಜೆಟ್ ಮಂಡಿಸಲಾಗಿದೆ’ ಎಂದು ಹೇಳಿದ್ದಾರೆ.

‘ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಮೂಲಭೂತ ಸೌಕರ್ಯಗಳಿಗೆ ವಿಶೇಷ ಒತ್ತು ನೀಡುವ ಜೊತೆಗೆ, ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕನ್ನಡಿಗನ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ತಿಳಿಸಿದ್ದಾರೆ.

‘ನಾಡಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಲಿ ಎಂಬ ಆಶಯ ನಮ್ಮದು’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು