Webdunia - Bharat's app for daily news and videos

Install App

ಗ್ಯಾರಂಟಿಯಿಂದ ನಷ್ವವಾಗಿಲ್ಲ, ಮುಂದುವರೆಸುವ ಬಗ್ಗೆ ಶಿವಕುಮಾರ್ ರಿಯ್ಯಾಕ್ಷನ್ ಹೀಗಿತ್ತು

Sampriya
ಗುರುವಾರ, 11 ಜುಲೈ 2024 (18:11 IST)
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು.

ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಏನನ್ನೂ ಮುಳುಗಿಸಿಲ್ಲ. ಹೀಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಕಳೆದ ವರ್ಷ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಅನ್ನು ನಾವು ಪುನರ್ ಪರಿಶೀಲಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು. ಈ ಬಾರಿಯ ಬಜೆಟ್ ನಲ್ಲಿ 50 ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗಿತ್ತು. ಮುಂದಿನ ದಿನಗಳಲ್ಲಿ ಜನ ನಮಗೆ ಸ್ಪಂದಿಸಲಿದ್ದಾರೆ ಎಂದು ತಿಳಿಸಿದರು.

ಹೆಚ್ಚಿನ ಮಳೆಗೆ ಪ್ರಾರ್ಥಿಸೋಣ:

ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸಿಆರ್ ಡಬ್ಲ್ಯೂಸಿ ಸಭೆ ತೀರ್ಮಾನದ ಬಗ್ಗೆ ಕೇಳಿದಾಗ, ಇನ್ನು ನಿರೀಕ್ಷಿತ ಮಟ್ಟದಲ್ಲಿ ನೀರಿನ ಸಂಗ್ರಹವಾಗಿಲ್ಲ. ಈ ಬಗ್ಗೆ ನಾನು ಈಗಲೇ ಏನು ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನಷ್ಟು ಮಳೆ ಬೀಳಲಿ ಎಂದು ಎಲ್ಲರೂ ಪ್ರಾರ್ಥಿಸೋಣ ಎಂದು ತಿಳಿಸಿದರು.

ನಾಳೆಯೂ ಸಭೆ ಮುಂದುವರಿಯಲಿದೆ:

ಇಂದಿನ ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ ಬಗ್ಗೆ ಕೇಳಿದಾಗ, ಲೋಕಸಭೆ ಚುನಾವಣೆ ಫಲಿತಾಂಶ ವಿಚಾರವಾಗಿ ಎಐಸಿಸಿ ಸತ್ಯಶೋಧನಾ ಸಮಿತಿ ಇಂದು ಶಾಸಕರು ಹಾಗೂ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದು, ನಾಳೆ ಪರಾಜಿತ ಅಭ್ಯರ್ಥಿಗಳು ಹಾಗೂ ಇತರ ನಾಯಕರ ಅಭಿಪ್ರಾಯ ಸಂಗ್ರಹಿಸಲಿದೆ. ನಂತರ ಈ ಸಮಿತಿಯು ಎಐಸಿಸಿಗೆ ತನ್ನ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments