Webdunia - Bharat's app for daily news and videos

Install App

ಕರಾವಳಿಯಲ್ಲಿ ಈ ವಾರ ಮತ್ತೆ ಭಾರೀ ಮಳೆ

Webdunia
ಮಂಗಳವಾರ, 3 ಜುಲೈ 2018 (09:49 IST)
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಬಿಡುವು ಪಡೆದಿರುವ ಮಳೆರಾಯ ಮತ್ತೆ ಈ ವಾರ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು, ಪುತ್ತೂರು ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಗೆ ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ಸಾರ್ವಜನಿಕರು ಕೊಂಚ ನಿರಾಳವಾಗುತ್ತಿರುವಂತೆಯೇ ಮತ್ತೆ ಈ ವಾರ ಭಾರೀ ಮಳೆಯಾಗುವ ಸೂಚನೆ ಸಿಕ್ಕಿದ್ದು, ಜನ ಆತಂಕಗೊಳ್ಳುವಂತೆ ಮಾಡಿದೆ.

ಈಗಾಗಲೇ ದ.ಕ. ಜಿಲ್ಲೆಯಲ್ಲಿ ದಶಕದಲ್ಲೇ ದಾಖಲೆ ಎನ್ನುವಷ್ಟು ಮಳೆಯಾಗಿದೆ. ಇದೀಗ ಮತ್ತೆ ಧಾರಾಕಾರ ಮಳೆಯ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದಲ್ಲಿ ಮಾತ್ರವಲ್ಲ, ತಮಿಳುನಾಡು,  ಜಮ್ಮು ಕಾಶ್ಮೀರ, ಚಂಡೀಘಡ, ಹರ್ಯಾಣ ಜಾರ್ಖಂಡ್ ಸೇರಿದಂತೆ ದೇಶದ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments