Webdunia - Bharat's app for daily news and videos

Install App

ತೊಕ್ಕೊಟ್ಟು ಫ್ಲೈ ಓವರ್ ಸಂಚಾರ ಆರಂಭ; ಅವ್ಯವಸ್ಥೆ ಸರಿಪಡಿಸಿ

Webdunia
ಗುರುವಾರ, 13 ಜೂನ್ 2019 (13:43 IST)
ಹಲವು ವರ್ಷಗಳ ನಿಧಾನಗತಿಯ ಕಾಮಗಾರಿಯ ನಂತರ ತೊಕೊಟ್ಟು ಫ್ಲೈ ಓವರ್ ಕೆಲಸ ಪೂರ್ಣಗೊಂಡಿದ್ದು ಇಂದಿನಿಂದ ಅದರಲ್ಲಿ ವಾಹನ ಸಂಚಾರ ಆರಂಭವಾಗಿದ್ದರೂ ಆದರೆ ಅವ್ಯವಸ್ಥೆ ತಾಂಡವವಾಡುತ್ತಿದೆ.  

ಮಂಗಳೂರಿನಿಂದ ಉಳ್ಳಾಲಕ್ಕೆ ಹೋಗುವ ವಾಹನಗಳಿಗೆ ತಿರುವು ಕೊಡುವ ಬಗ್ಗೆ ಸಮರ್ಪಕ ವ್ಯವಸ್ಥೆ ಮಾಡದಿರುವ ಕಾರಣ ಅಪಘಾತದ ಸಾಧ್ಯತೆಗಳು ಹೆಚ್ಚಿವೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಗಮನಹರಿಸಿ ತೊಕ್ಕೊಟ್ಟುವಿನಿಂದ ಉಳ್ಳಾಲಕ್ಕೆ ಹೋಗಲು ಸಮರ್ಪಕ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಉಳ್ಳಾಲ ವಲಯ ಡಿವೈಎಫ್‍ಐ ಒತ್ತಾಯಿಸಿದೆ .

ಈ ಭಾಗದ ವಾಹನ ಸವಾರರ ಬಹುದಿನಗಳ ಬೇಡಿಕೆಯಾದ ತೊಕ್ಕೊಟ್ಟು ಫ್ಳೈ ಓವರ್ ಕಾಮಗಾರಿ ಪೂರ್ಣಗೊಳಿಸುವಂತೆ ಡಿವೈಎಫ್‍ಐ ಸಂಘಟನೆ ಹಲವು ಹೋರಾಟಗಳನ್ನು ನಡೆಸಿತ್ತು. ಈ ಹೋರಾಟದಲ್ಲಿ ಪಾಲ್ಗೊಂಡ ಎಲ್ಲಾ ನಾಗರೀಕರಿಗೂ ಸಂಘಟನೆ ಅಭಿನಂದನೆ ಸಲ್ಲಿಸುತ್ತದೆ. ಫ್ಳೈ ಓವರ್ ಪೂರ್ಣಗೊಂಡಿದ್ದರೂ ಅವೈಜ್ಞಾನಿಕ ರೀತಿಯ ಕಾಮಗಾರಿಗಾಗಿ ಫ್ಲೈ ಓವರ್ ನಿರ್ಮಿಸಿದ ನವಯುಗ ಸಂಸ್ಥೆ , ಯೋಜನೆಯ ಬಗ್ಗೆ ಅರಿವಿದ್ದರೂ ಇದರ ಅವೈಜ್ಞಾನಿಕ ನೀಲನಕ್ಷೆಯ ಬಗ್ಗೆ ಚಕಾರ ಎತ್ತದ ಸಂಸದರು ಹಾಗೂ ಈ ಭಾಗದ ಶಾಸಕರು ನೇರ ಹೊಣೆಯಾಗಿದ್ದಾರೆ.

ಈಗ ಕಾಮಗಾರಿ ಪೂರ್ಣಗೊಂಡ ನಂತರ ಇಲ್ಲಿನ ಶಾಸಕರು , ಸಚಿವರೂ ಆದ ಯು.ಟಿ ಖಾದರ್ ಈ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಹೇಳಿಕೆ ನೀಡುತ್ತಿರುವುದು ಕೇವಲ ಒಂದು ರಾಜಕೀಯ ಗಿಮಿಕ್ ಆಗಿದೆ. ಪ್ರತಿದಿನ ತಾವು ಒಡಾಡುವ ರಸ್ತೆಯ ಮಧ್ಯದಲ್ಲೆ ಈ ಕಾಮಗಾರಿ ನಡೆಯುತ್ತಿದ್ದರೂ ಇಷ್ಟು ದಿನ ಸುಮ್ಮನೇ ಇದ್ದು ಈಗ ಏಕಾಏಕಿ ಇಂತಹ ಹೇಳಿಕೆ ಕೊಟ್ಟು ರಾಜಕೀಯ ಲಾಭ ಪಡೆಯುವ ಬದಲು ಈ ಅವ್ಯವಸ್ಥೆಯನ್ನು ಸರಿಪಡಿಸಲು ಮುಂದಾಗಬೇಕೆಂದು ಡಿವೈಎಫ್‍ಐ ಉಳ್ಳಾಲ ವಲಯ ಕಾರ್ಯದರ್ಶಿ ರಝಾಕ್ ಮೊಂಟೆಪದವು ಒತ್ತಾಯಿಸಿದ್ದಾರೆ .


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments