Webdunia - Bharat's app for daily news and videos

Install App

1 ರಿಂದ 8ನೇ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಆ. 30ರಂದು ನಿರ್ಧಾರ: ಬಿ.ಸಿ. ನಾಗೇಶ್

Webdunia
ಗುರುವಾರ, 26 ಆಗಸ್ಟ್ 2021 (11:16 IST)
ಹುಬ್ಬಳ್ಳಿ: 1ರಿಂದ 8ನೇ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಆ. 30ರಂದು ಮುಖ್ಯಮಂತ್ರಿಗ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದರು.

ಗುರುವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ. 23ರಿಂದ 9ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಅದರ ಸಾಧಕ-ಬಾಧಕಗಳನ್ನು ಅವಲೋಕಿಸಿ 1ರಿಂದ 8ನೇ ತರಗತಿಗಳನ್ನು ಆರಂಭಿಸುವ ಕುರಿತು ಚಿಂತನೆ ಮಾಡಲಾಗುವುದು ಎಂದರು.
ಉನ್ನತ ಮಟ್ಟದ ತಜ್ಞರ ಸಮಿತಿಯ ಡಾ. ದೇವಿಪ್ರಸಾದ ಶೆಟ್ಟಿ ಅವರು 6 ರಿಂದ 8ನೇ ತರಗತಿ ಆರಂಭಿಸಬಹುದೆಂದು ಸಲಹೆ ನೀಡಿದ್ದಾರೆ. ಜೊತೆಗೆ ಕಳೆದ ನಾಲ್ಕು ದಿನಗಳಿಂದ ಆರಂಭವಾದ ಶಾಲೆಗಳ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರಿಂದ ಉತ್ತಮ ಉತ್ಸಾಹ ಕಂಡುಬಂದಿದೆ. ಇದರಿಂದ ಶಾಲೆಗಳನ್ನು ಆರಂಭಿಸಬೇಕೆಂಬ ಆಲೋಚನೆ ವ್ಯಕ್ತವಾಗುತ್ತಿದೆ. ಆದರೆ ತಾಂತ್ರಿಕ ಸಮಿತಿಯ ವರದಿ ಮೇಲೆ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಕಳೆದ ಒಂದು ವರ್ಷದಿಂದ ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಪುನಃ ಶಿಕ್ಷಣ ನೀಡುವ ಉದ್ದೇಶದಿಂದ 1ರಿಂದ 8ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಉತ್ಸುಕವಾಗಿದೆ. ಮಕ್ಕಳ ತಜ್ಞರು ಹಾಗೂ ಶಿಕ್ಷಣ ತಜ್ಞರು ಸೇರಿದಂತೆ ಎಲ್ಲರೂ ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಆಧಾರದ ಮೇಲೆ ಶಾಲೆಗಳನ್ನು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಆರಂಭಿಸಲಾಗುವುದು. ಅಕಸ್ಮಾತ್ ಮೂರನೇ ಅಲೆ ವ್ಯಾಪಿಸಿದರೆ ಶಾಲೆಗಳನ್ನು ಬಂದ್ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಹೆಚ್ಚಿನ ಶಿಕ್ಷಕರಿಗೆ ಅನುಕೂಲವಾಗುವಂತೆ ಶಿಕ್ಷಕರ ವರ್ಗಾವಣೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 5 ರಿಂದ ಕೌನ್ಸಲಿಂಗ್ ಆರಂಭವಾಗಲಿದ್ದು, ಆ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಶೀಲಿಸಿ ಸರಿಪಡಿಸಲಾಗುವುದು, ಇದರಿಂದ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಗೆ ಒಳ್ಳೆಯದಾಗುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments