Select Your Language

Notifications

webdunia
webdunia
webdunia
webdunia

ಅಭಿವೃದ್ಧಿ ಕಾರ್ಯ ಸಹಿಸದವರಿಂದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು: ಸಚಿವ ಎಚ್‌.ಸಿ.ಮಹಾದೇವಪ್ಪ

ಅಭಿವೃದ್ಧಿ ಕಾರ್ಯ ಸಹಿಸದವರಿಂದ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು: ಸಚಿವ ಎಚ್‌.ಸಿ.ಮಹಾದೇವಪ್ಪ
ಮೈಸೂರು , ಗುರುವಾರ, 17 ನವೆಂಬರ್ 2016 (20:41 IST)
ನಾನು ಮಾಡಿರುವ ಅಭಿವೃದ್ಧಿ ಕಾರ್ಯ ಸಹಿಸಲಾಗದೆ ನನ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿದೆ. ನ್ಯಾಯಕ್ಕೆ ಎಲ್ಲರೂ ತಲೆಬಾಗಲೇಬೇಕು ಎಂದು ಲೋಕೋಪಯೋಗಿ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. 
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಸಾಬೀತುಪಡಿಸಲಿ. ಸುಖಾಸುಮ್ಮನೆ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದರು. 
 
ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಎಲ್ಲಿ ಭ್ರಷ್ಟಾಚಾರ ನಡೆದಿದೆ ತೋರಿಸಲಿ. ದೂರು ನೀಡಿ ಸಮಯ ವ್ಯರ್ಥ ಮಾಡುವುದಕ್ಕಿಂತ ಅಭಿವೃದ್ಧಿ ಕಾರ್ಯಗಳಲ್ಲಿ ತೋರಿಸಿದರೆ ಸಾಕು ಎಂದು ತಿರುಗೇಟು ನೀಡಿದರು. 
 
ಕಾನೂನು ಬಾಹಿರವಾಗಿ ಟೆಂಡರ್ ನೀಡುವುದರ ಜೊತೆಗೆ ಪ್ರಧಾನ ಗುತ್ತಿಗೆದಾರರಿಂದ ದೊಡ್ಡ ಮಟ್ಟದ ಕಿಕ್‌ಬ್ಯಾಕ್ ಹಣ ಪಡೆಯಲಾಗಿದೆ ಎಂದು ಆರೋಪಿಸಿ ಗುತ್ತಿಗೆದಾರ ಬಸವೇಗೌಡ ಎಂಬುವರು ಸಚಿವ ಮಹದೇವಪ್ಪನವರ ವಿರುದ್ಧ ದೂರು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನೋಟು ನಿಷೇಧದ ವಿರುದ್ಧ ಶಿವಸೇನೆ ಪ್ರತಿಭಟನೆ: ಠಾಕ್ರೆಗೆ ಫೋನಾಯಿಸಿದ ರಾಜನಾಥ್ ಸಿಂಗ್