Webdunia - Bharat's app for daily news and videos

Install App

ಗಡಿಯಲ್ಲಿ ಲಾಕ್ ಆದವರು ಕರಾವಳಿಗೆ ವಾಪಸ್ ಆಗಿದ್ದು ಹೇಗೆ?

Webdunia
ಗುರುವಾರ, 21 ಮೇ 2020 (20:56 IST)
ಗಡಿಯಲ್ಲಿ ಲಾಕ್ ಆದ ಕರಾವಳಿಗರು ಕೊನೆಗೂ ವಾಪಸ್ ಆಗಿದ್ದಾರೆ.

ಬೆಳಗಾವಿಯ ನಿಪ್ಪಾಣಿಯಲ್ಲಿ ಕಳೆದ ಎರಡು ದಿನಗಳಿಂದ ಸಿಲುಕಿದ್ದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಗರಿಗೆ ಇದೀಗ ತಮ್ಮ ತಮ್ಮ ಜಿಲ್ಲೆಗೆ ಆಗಮಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಮುಕ್ತ ಅವಕಾಶ ಸಿಕ್ಕಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ 7 ತಿಂಗಳ ಗರ್ಭಿಣಿ ಸೇರಿದಂತೆ ಸುಮಾರು 30 ಜನರು ಹೊರಟಿದ್ದರು.  ಇವರೆಲ್ಲಾ ಸೇವಾ ಸಿಂಧು ಪಾಸ್ ಇಲ್ಲದ ಕಾರಣ ಬೆಳಗಾವಿಯ ನಿಪ್ಪಾಣಿಯಲ್ಲಿ ಲಾಕ್ ಆಗಿದ್ದರು. 

ಈ ಕುರಿತು ಸಚಿವ ಬಸವರಾಜ ಬೊಮ್ಮಾಯಿ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ನಾನು ಅವರು ಸಿಎಂ ಗಮನಕ್ಕೆ ತಂದಿದ್ದೆವು. ಇದೀಗ ಸಿಎಂ ಹಸಿರು ನಿಶಾನೆ ತೋರಿದ್ದು, ನಿಪ್ಪಾಣಿಯಲ್ಲಿ ಸಿಲುಕಿ ಹಾಕಿಕೊಂಡಿದ್ದವರು ತಮ್ಮ ತಮ್ಮ ಜಿಲ್ಲೆಗೆ ಬರಲು ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments