Webdunia - Bharat's app for daily news and videos

Install App

ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ : ರಮೇಶ್ ಕುಮಾರ್

Webdunia
ಶನಿವಾರ, 6 ಮೇ 2023 (11:54 IST)
ಕೋಲಾರ : ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.
 
ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರಾಯಲಪಾಡುನಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಪ್ರದಾನಿ ನರೇಂದ್ರ ಮೋದಿ ಪ್ರವಾಸ ಕುರಿತು ಪ್ರತಿಕ್ರಿಯಿಸಿ, ಮದನಪಲ್ಲಿಯಲ್ಲಿ ಬೀಡಿ ಮಾರಾಟ ಮಾಡಲು ತಿರುಗುವ ಹಾಗೆ ಇವರು ತಿರುಗುತ್ತಿದ್ದಾರೆ. ಲಾಲ್ ಬಹಾದ್ದೂರ್ ಶಾಸ್ತ್ರಿ, ಇಂದಿರಾಗಾಂಧಿಯಂತಹವರೆಲ್ಲ ಪ್ರಧಾನಿ ಆಗಿದ್ದರು, ಈ ರೀತಿ ಆಡಲಿಲ್ಲ. ನಿಮ್ಮ ಸಚಿವರು ಲಂಚ ತೆಗೆದುಕೊಂಡಿದ್ದಾರೆ ಎಂದು ಗುತ್ತಿಗೆದಾರರು ಬರೆದ ಪತ್ರಕ್ಕೆ ಈ ದಿನದವರೆಗೂ ಉತ್ತರ ನೀಡಲಿಲ್ಲ ಎಂದು ಕಿಡಿಕಾರಿದರು.

7 ಕೆ.ಜಿ ಕೊಡುತ್ತಿದ್ದ ಅಕ್ಕಿಯನ್ನು 4 ಕೆ.ಜಿಗೆ ಇಳಿಸಿದರು. ಕಾಂಗ್ರೆಸ್ನ ಗುರುತಿನಿಂದ ಗೆದ್ದ ಶಾಸಕರನ್ನು ಕೋಟ್ಯಂತರ ಹಣ ಕೊಟ್ಟು ಖರೀದಿಸಿದರು. ಹೀಗೆ ಸರ್ಕಾರ ರಚಿಸಿ ಈ ರೀತಿಯಾಗಿ ಸರ್ಕಾರ ನಡೆಸುತ್ತಿದ್ದಾರೆ. ಕರ್ನಾಟಕದ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಸರ್ವನಾಶ ಮಾಡಿದೆ. ಈ ಸರ್ಕಾರಕ್ಕೆ ಮಾನವೀಯತೆ ಇಲ್ಲ, ಅರ್ಥವೂ ಇಲ್ಲ ಎಂದು ವಾಗ್ದಾಳಿ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments